Publish Date: Mon, 09 May 2022 (19:30 IST)
Updated Date: Mon, 09 May 2022 (19:32 IST)
ರಾಜ್ಯದಲ್ಲಿ ಆಜಾನ್ V/S ಭಜನ್ ಸಮರ ಜೋರಾಗಿಯೇ ಇದೆ.. ಈ ಕುರಿತು ಕೈ ಮುಖಂಡ ಯು.ಟಿ.ಖಾದರ್ ಪ್ರತಿಕ್ರಿಯೆ ನೀಡಿದ್ದಾರೆ..ಕೆಲವೊಂದು ಶಕ್ತಿಗಳು ರಾಜ್ಯದಲ್ಲಿ ಅಶಾಂತಿ ಉಂಟು ಮಾಡಲು ಯತ್ನ ಮಾಡುತ್ತಿವೆ..
ಸರ್ಕಾರ ಶಾಂತಿಯುತ ವಾತಾವರಣ ನಿರ್ಮಾಣ ಮಾಡಬೇಕು, ರಾಜ್ಯದ ಜನರು ಶಾಂತಿ ಸೌಹಾರ್ದತೆ ನಿರೀಕ್ಷೆ ಮಾಡ್ತಿದ್ದಾರೆ..ಈ ನಿಟ್ಟಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಚರ್ಚೆ ಮಾಡಿದ್ದೇವೆ..ಸಿಎಂ ಕೂಡ ಎಲ್ಲಾ ರೀತಿಯ ಕ್ರಮಕೈಗೊಳ್ಳುವ ಭರವಸೆ ಕೊಟ್ಟಿದ್ದಾರೆ..ಆದ್ರೆ, ಅಜಾನ್ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಎಲ್ಲಿಯೂ ಹೇಳಿಲ್ಲ ಎಂದು ಯು.ಟಿ.ಖಾದರ್ ಹೇಳಿಕೆ ನೀಡಿದ್ದಾರೆ.