Webdunia - Bharat's app for daily news and videos

Install App

ಆಗಸ್ಟ್ 15ಕ್ಕೆ ನಗುವಿನ ಹೂಗಳ ಮೇಲೆ ಸ್ಕ್ರಿಪ್ಟ್ ಪೂಜೆ

Webdunia
ಗುರುವಾರ, 19 ಆಗಸ್ಟ್ 2021 (17:45 IST)
ಅಗಸ್ಟ್ 15ರಂದು ವೆಂಕಟ್ ಭಾರದ್ವಾಜ್ ನಿರ್ದೇಶನದ ಹೊಸ ಚಿತ್ರ "ನಗುವಿನ ಹೂಗಳ ಮೇಲೆ " ಚಿತ್ರದ ಶೀರ್ಷಿಕೆ ಹಾಗೂ ಸ್ಕ್ರಿಪ್ಟ್ ಪೂಜೆ ಜಯನಗರದ ಅಭಯ ಗಣಪತಿ ಹಾಗೂ ನಿಮಿಷಾಂಬ ದೇವಸ್ಥಾನದಲ್ಲಿ ಸರಳವಾಗಿ ನೆರವೇರಿತು, ಚಿತ್ರದ ಪೂಜಾ ಸಂದರ್ಭದಲ್ಲಿ ಚಲನ ಚಿತ್ರ ಪ್ರಚಾರ ಕರ್ತ ಸುಧೀಂದ್ರ ವೆಂಕಟೇಶ್ ಹಾಜರಿದ್ದರು.
ನಗುವಿನ ಹೂವುಗಳ ಮೇಲೆ" ಹೆಸರು ಹೇಳಿದಂತೆ ಇದು ಒಂದು ಪ್ರೇಮಕಥಾ ಹಂದರ ವಾಗಿದ್ದು ವೆಂಕಟ್ ಭಾರದ್ವಾಜ್ ರವರ 10ನೇ
ಚಿತ್ರವಾಗಿದೆ. ಈ ಚಿತ್ರಕ್ಕೆ ತೆಲುಗು ಚಿತ್ರರಂಗದ ಹೆಸರಾಂತ ನಿರ್ಮಾಪಕರಾದ ಶ್ರೀ ಕೆಕೆ ರಾಧಾ ಮೋಹನ್ ನಿರ್ಮಾಣ ಮಾಡುತ್ತಿದ್ದಾರೆ.
ರಾಧಾ ಮೋಹನ್ ಅವರು ತೆಲುಗು ಚಿತ್ರರಂಗದಲ್ಲಿ ಸುಮಾರು ಹತ್ತು ದೊಡ್ಡ ಚಿತ್ರಗಳನ್ನು ನಿರ್ಮಿಸಿದ್ದು ' ನಗುವಿನ ಹೂಗಳ' ಮೇಲೆ ಚಿತ್ರವೂ ಮೊದಲ ಕನ್ನಡ ಚಿತ್ರವಾಗಿದ್ದು ಬಹಳಷ್ಟು ನಿರೀಕ್ಷೆಯನ್ನು ಈ ಚಿತ್ರದ ಮೇಲೆ ಇಟ್ಟಿದ್ದಾರೆ. ಇತ್ತೀಚಿಗೆ ವೆಂಕಟ್ ಭಾರದ್ವಾಜ್ ರವರ ಆಮ್ಲೆಟ್ ಚಿತ್ರ ನೋಡಿ ಮೆಚ್ಚಿಈ ಚಿತ್ರವನ್ನು ಮಾಡಲು ಮುಂದೆ ಬಂದಿದ್ದೇನೆ ಎಂದು ವಿವರಿಸಿದರು.
ಈ ಚಿತ್ರದಲ್ಲಿ ಹೊಸ ನಾಯಕಿ ಹಾಗೂ ನಾಯಕನನ್ನು ಪರಿಚಯಿಸಲು ವೆಂಕಟ್ ಭಾರದ್ವಾಜ್  ಹುಡುಕಾಟದಲ್ಲಿದ್ದು, ಈ ವಾರ ನಾಯಕ ಮತ್ತು ನಾಯಕಿ ಗಾಗಿ ಆಡಿಶನ್ ಕೂಡ ಕರೆಯಲಾಗಿದೆ ಯಂದು ನಿರ್ದೇಶಕರು ತಿಳಿಸಿದರು.
"ನಗುವಿನ ಹೂಗಳ ಮೇಲೆ" ಮೊಟ್ಟಮೊದಲ ಪ್ರೇಮಕಥ ವಸ್ತುವನ್ನು ವೆಂಕಟ್ ಭಾರದ್ವಾಜ್ ಅವರು ತೆರೆಯ ಮೇಲೆ ತರುವುದಕ್ಕೆ ಎಲ್ಲಾ ಪ್ರಿ ಪ್ರೊಡಕ್ಷನ್ ಕೆಲಸ ಮುಗಿಸಿದ್ದಾರೆ. ಚಿತ್ರವು ಒಂದೇ ಹಂತದಲ್ಲಿ ಚಿತ್ರೀಕರಣ ಮಾಡಲು ಸಜ್ಜಾಗುತ್ತಿದ್ದು, ಬೆಂಗಳೂರು ಶಿವಮೊಗ್ಗ ತೀರ್ಥಹಳ್ಳಿ ಕುಂದಾಪುರ ಮತ್ತು ಮರವಂತೆ ಜಾಗದಲ್ಲಿ ಚಿತ್ರೀಕರಣ ಮಾಡಲು ತಂಡ ಸಜ್ಜಾಗಿದೆ.
"ನಗುವಿನ ಹೂಗಳ ಮೇಲೆ" ಚಿತ್ರವು ಸಂಗೀತಮಯ ಮತ್ತು ಪ್ರಕೃತಿಯ ಮಡಿಲಲ್ಲಿ ನಡೆಯುವ ಕಥೆಯಾಗಿದ್ದು ಚಿತ್ರಕ್ಕೆ ಲವ್ ಪ್ರಾನ್ ಮೆಹತಾ ರವರು ಆರು ಹಾಡುಗಳನ್ನು ನಿರ್ದೇಶನ ಮಾಡಿದ್ದು ಇದಕ್ಕೆ ಚಿದಂಬರ ನರೇಂದ್ರ , ನರೇಂದ್ರಬಾಬು, ಮಹೇಶ್ ಮತ್ತು ಪ್ರಮೋದ್ ಮರವಂತೆ ಗೀತೆಗಳನ್ನು ರಚಿಸಿದ್ದಾರೆ. ಚಿತ್ರಕ್ಕೆ ಚಂದನ್ ಅವರ ಸಂಕಲನ, ಪ್ರಮೋದ್ ಭಾರತೀಯ ರವರ ಛಾಯಾಗ್ರಹಣ, ಲಾರೆನ್ಸ್ ಪ್ರೀತಮ್ ರವರ ಸಹನಿರ್ದೇಶನವಿದೆ. ಸೆಪ್ಟೆಂಬರ್ ಎರಡನೆಯ ವಾರದಲ್ಲಿ ಚಿತ್ರೀಕರಣ ಶುರುವಾಗಲಿದೆ ಎಂದು ಚಿತ್ರತಂಡ ನಮ್ಮೊಂದಿಗೆ ಹಂಚಿಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತ: ಪ್ರಾಣ ಉಳಿಸಿಕೊಳ್ಳಲು ಬಿಲ್ಡಿಂಗ್‌ನಿಂದ ವಿದ್ಯಾರ್ಥಿಗಳು ಹಾರುತ್ತಿರುವ ಭೀಕರ ವಿಡಿಯೋ ವೈರಲ್‌

ಶೀಘ್ರದಲ್ಲೇ ನಿವೃತ್ತಿ ಪಡೆಯುವುದಾಗಿ ಹೇಳಿದ್ದ: ಕ್ಯಾಪ್ಟನ್ ಸುಮೀತ್‌ ಸಬರ್ವಾಲ್‌ಗೆ ತಂದೆಯ ಕಣ್ಣೀರ ಅಂತಿಮ ವಿದಾಯ

ರಾತೋರಾತ್ರಿ ಹಿಂದೂ ಕಾರ್ಯಕರ್ತರ ಮನೆಗೆ ಪೊಲೀಸರ ಭೇಟಿ: ತನಿಖೆಗೆ ಆದೇಶ

ಬಾಂಬ್‌ ಬೆದರಿಕೆ: ನಾಗ್ಪುರ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ಲಂಡನ್ ಬೆನ್ನಲ್ಲೇ ಪ್ಯಾರಿಸ್‌ಗೆ ನಿಗದಿಯಾಗಿದ್ದ ಏರ್‌ ಇಂಡಿಯಾ ವಿಮಾನ ರದ್ದು

ಮುಂದಿನ ಸುದ್ದಿ
Show comments