Webdunia - Bharat's app for daily news and videos

Install App

ಆಟೋ-ಕಾರು ಅಪಘಾತ: ಮಹಿಳೆ ಸಾವು

Webdunia
ಸೋಮವಾರ, 25 ಜುಲೈ 2022 (20:17 IST)
ಆಪೇ ಆಟೋ ಮತ್ತು ಓಮಿನಿ ಕಾರಿನ ನಡುವೆ ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ನರಸೀಪುರ ತಾಲೂಕಿನ ಸೋಸಲೆ ಗ್ರಾಮದ ಸಮೀಪ ಸೋಮವಾರ ಮುಂಜಾನೆ ಸಂಭವಿಸಿದೆ. ಮೈಸೂರಿನ ಜೆಪಿ ನಗರ ನಿವಾಸಿ ವಿಶಾಲಾಕ್ಷಿ ಮೃತ ಮಹಿಳೆ.ಅಪಘಾತದಲ್ಲಿ ಮೃತ ವಿಶಾಲಾಕ್ಷಿ ಪತಿ ಶಂಕರ್ ಹಾಗೂ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದಾರೆ. ಇವರನ್ನು ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಪೇ ಆಟೋದಲ್ಲಿ ಪ್ರಯಾಣ ಮಾಡುತ್ತಿದ್ದ ಮಳವಳ್ಳಿ ತಾಲೂಕಿನ ನಂಜೇಗೌಡನಪುರ ಗ್ರಾಮಸ್ಥರಾದ ರಾಜು, ಮಣಿ, ರತ್ನಮ್ಮ ಎಂಬುವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳೀಯರ ಸಹಾಯದಿಂದ ಗಾಯಾಳುಗಳ ರಕ್ಷಣೆ‌ ಮಾಡಲಾಗಿದೆ. ಸ್ಥಳಕ್ಕೆ ಬನ್ನೂರು ಠಾಣೆ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments