ಕೆಲಸ ಹುಡುಕಿಕೊಂಡು ಬಂದ ಯುವಕ,ಯುವತಿಗೆ ಅಟೋ ಚಾಲಕ ಏನೆಲ್ಲಾ ಮಾಡಿದ ಗೊತ್ತಾ

Krishnaveni K
ಶುಕ್ರವಾರ, 24 ಮೇ 2024 (10:46 IST)
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿಗೆ ಪ್ರತಿನಿತ್ಯ ಕೆಲಸ ಹುಡುಕಿಕೊಂಡು ಅದೆಷ್ಟೋ ಮಂದಿ ದೂರದ ಊರುಗಳಿಂದ ಬಂದಿಳಿಯುತ್ತಾರೆ. ಆದರೆ ಇಲ್ಲಿ ಬಂದು ವಂಚನೆಗೊಳಗಾಗುವ ಎಷ್ಟೋ ಜನರಿರುತ್ತಾರೆ. ಅಂತಹದ್ದೇ ಘಟನೆಯೊಂದು ಕೋಣಕುಂಟೆ ಪೊಲೀಸ್ ಸ್ಟೇಷನ್ ‍ವ್ಯಾಪ್ತಿಯಲ್ಲಿ ನಡೆದಿದೆ.

ಕೇರಳ ಮೂಲದ ಯುವತಿಯೊಬ್ಬಳು ತನ್ನ ಗೆಳೆಯನ ಜೊತೆ ಕೆಲಸ ಹುಡುಕಿಕೊಂಡು ಬೆಂಗಳೂರಿಗೆ ಬಂದಿದ್ದಾರೆ. ಬೆಂಗಳೂರಿನಲ್ಲಿರುವ ಮತ್ತೊಬ್ಬ ಗೆಳೆಯ ಸಹಾಯ ಮಾಡುತ್ತಾನೆಂಬ ನಿರೀಕ್ಷೆಯಲ್ಲಿ ರಾತ್ರಿ 10.30 ರ ವೇಳೆಗೆ ಜಯನಗರ ಮೆಟ್ರೋ ಸ್ಟೇಷನ್ ಬಳಿ ಕಾಯುತ್ತಾ ನಿಂತಿದ್ದರು. ಆದರೆ ಆ ಗೆಳೆಯ ಬರಲೇ ಇಲ್ಲ.

ಈ ವೇಳೆ ಇವರನ್ನು ಗಮನಿಸಿದ ಆರೋಪಿ ಆಟೋ ಚಾಲಕ ಇಬ್ಬರನ್ನೂ ಪುಸಲಾಯಿಸಿ ತನ್ನ ಜೊತೆಗೆ ಕರೆದೊಯ್ದಿದ್ದಾನೆ. ಎಲ್ಲಿಗೆ ಹೋಗಬೇಕು ಎಂದು ಕೇಳಿದಾಗ ಯುವಕ ಮತ್ತು ಯುವತಿ ರೈಲ್ವೇ ಸ್ಟೇಷನ್ ಗೆ ಬಿಟ್ಟರೆ ಸಾಕು ಎಂದು ಹೇಳಿದ್ದಾರೆ. ಆದರೆ ಇವರಿಬ್ಬರ ಅಸಹಾಯಕತೆ ಗಮನಿಸಿದ ಆಟೋ ಚಾಲಕ ತನ್ನದೊಂದು ಮನೆಯಿದೆ, ಈವತ್ತು ರಾತ್ರಿ ಅಲ್ಲಿರಬಹುದು ಎಂದು ಹೇಳಿ ಪಿಳ್ಳಗಾನಹಳ್ಳಿಯ ಮನೆಗೆ ಕರೆದೊಯ್ದಿದ್ದಾನೆ.

ದಾರಿ ನಡುವೆ ಆಟೋ ಚಾಲಕ ಮದ್ಯ ಖರೀದಿಸಿದ್ದ. ಮನೆಗೆ ಬಂದ ಮೇಲೆ ಯುವಕ-ಯುವತಿಯ ಎದುರೇ ಮದ್ಯಪಾನ ಮಾಡಿದ್ದಾನೆ. ಯುವಕನಿಗೂ ಬಲವಂತವಾಗಿ ಮದ್ಯ ಕುಡಿಸಿದ್ದಾನೆ. ಮದ್ಯದ ಮತ್ತಿನಲ್ಲಿ ಯುವತಿಯನ್ನು ತನ್ನ ಜೊತೆ ಮಲಗುವಂತೆ ಕರೆದಿದ್ದಾನೆ. ಯವತಿ ನಿರಾಕರಿಸಿದಾಗ ಹಲ್ಲೆ ಮಾಡಿದ್ದಾನೆ. ಈ ವೇಳೆ ಯುವಕನೂ ತಡೆಯಲು ಯತ್ನಿಸಿದ್ದು, ಅಲ್ಲೇ ಇದ್ದ ಚಾಕುವಿನಿಂದ ಇಬ್ಬರೂ ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ. ಬಳಿಕ ಅಲ್ಲಿಂದ ಹೇಗೋ ದಾರಿ ಮಾಡಿಕೊಂಡು ತಪ್ಪಿಸಿಕೊಂಡಿದ್ದಾರೆ. ಈಗ ಕೋಣನಕುಂಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು: ಜಗದೀಶ್ ಶೆಟ್ಟರೆ ಆಗ್ರಹ

BB Season 12, ಧ್ರುವಂತ್ ಮಾತಿಂದ್ದ ರೊಚ್ಚಿಗೆದ್ದ ಸೂರಜ್, ಧನುಷ್, ಸ್ಪಂದನಾ

ಸಿದ್ದರಾಮಯ್ಯ ಕಾಂಗ್ರೆಸ್ಸಿಗನೂ ಅಲ್ಲ, ಜೆಡಿಎಸ್ ಅಲ್ಲ, ಅಹಿಂದ ನಾಯಕನೂ ಅಲ್ಲ: ಎಚ್ ವಿಶ್ವನಾಥ್

ಸಿದ್ದು, ಡಿಕೆಶಿ ಕುರ್ಚಿ ಕಿತ್ತಾಟದ ನಡುವೆ ಈ ಸಚಿವನಿಗೆ ಸಿಎಂ ಸ್ಥಾನ ನೀಡಬೇಕೆಂದ ಮುನಿ ಸ್ವಾಮೀಜಿ

ದೆಹಲಿ ನಮ್ಮ ದೇವಸ್ಥಾನ, ಸಿಎಂ ಕುರ್ಚಿ ಕಿತ್ತಾಟದ ನಡುವೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments