ಬಾಡಿಗೆಗೆ ಬರಲು ಒಪ್ಪದ ಕಾರಣಕ್ಕಾಗಿ ಆಟೋ ಚಾಲಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಂಗಳೂರಿನ ವಿನೋಬನಗರದಲ್ಲಿ ನಡೆದಿದೆ.
ಗುರುವಾರ ಮತ್ತು ಶುಕ್ರವಾರದ ನಡುವಿನ ರಾತ್ರಿ ಸುಮಾರು 1 ಗಂಟೆಗೆ ಈ ದುರ್ಘಟನೆ ನಡೆದಿದ್ದು ಮೃತನನ್ನು
ಅಬ್ದುಲ್ ರಹೀಮ್ (32) ಎಂದು ಗುರುತಿಸಲಾಗಿದೆ.
ಕಳೆದ ನಾಲ್ಕು ದಿನಗಳ ಹಿಂದೆ ಜಾವೇದ್ ಎಂಬಾತ ರಹೀಮ್ ಬಳಿ ಬಾಡಿಗೆಗೆ ಬರುವಂತೆ ಕೇಳಿದ್ದ.ಜಾವೇದ್ ಪಿಕ್ ಪಾಕೆಟ್ ಮಾಡುತ್ತಿದ್ದಾನೆ ಎಂಬ ಆರೋಪವನ್ನು ಹೊತ್ತಿರುವುದರಿಂದ ಆತನೊಂದಿಗೆ ಬಾಡಿಗೆಗೆ ಹೊೋಗಲು ನಿರಾಕರಿಸಿದ್ದ. ಈ ಕ್ಷುಲ್ಲಕ ಕಾರಣಕ್ಕೆ ರಹೀಮ್ ಮೇಲೆ ಕೋಪಗೊಂಡ ಜಾವೇದ್ ಮಧ್ಯರಾತ್ರಿ ಸಹಚರರೊಡನೆ ಆಗಮಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಜೆ.ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.