ಶ್ರೀಮಂತನೆಂದು ಆಟೊ ಚಾಲಕನ ಪುತ್ರ ಕಿಡ್ನಾಪ್!

Webdunia
ಮಂಗಳವಾರ, 23 ನವೆಂಬರ್ 2021 (17:22 IST)
ಬೆಂಗಳೂರು :  ಕಾಲೇಜಿಗೆ  ಕಾರಿನಲ್ಲಿ ಬರುತ್ತಿದ್ದ ಸಹಪಾಠಿ ಶ್ರೀಮಂತನೆಂದು ಭಾವಿಸಿ ಆತನನ್ನು ಅಪಹರಿಸಿ  1.20 ಲಕ್ಷ ರು ಸುಲಿಗೆ ಮಾಡಿದ್ದ ಮೂವರು ವಿದ್ಯಾರ್ಥಿಗಳು ಸೇರಿದಂತೆ ಆರು ಮಂದಿಯನ್ನು ಅನ್ನ ಪೂರ್ಣೇಶ್ವರಿ ನಗರ ಠಾಣೆ ಪೊಲೀಸರು  ಬಂಧಿಸಿದ್ದಾರೆ.
ನಗರದ ಖಾಸಗಿ ಕಾಲೇಜಿನ ಬಿಸಿಎ ಪದವಿ ವಿದ್ಯಾರ್ಥಿಗಳಾದ ಭುವನ್, ಪ್ರಜ್ವಲ್, ಅನಿಲ್ ಮತ್ತು ಬಿಪಿಒ  ಉದ್ಯೋಗಿಗಳಾದ ದೀಪು, ನಿಶ್ಚಯ್, ಕ್ಯಾಬ್ ಚಾಲಕ ಪ್ರಜ್ವಲ್ ಬಂಧಿತರು. ಈ ಆರು ಮಂದಿ ನ.18ರಂದು ಪಾಪ ರೆಡ್ಡಿ ಪಾಳ್ಯದ ಬಿಸಿಎ ಪದವಿ ವಿದ್ಯಾರ್ಥಿ ಅಭಿಷೇಕ್ (20) ಎಂಬುವವನ್ನು ಅಪಹರಿಸಿ, ಚಿನ್ನದ ಸರ ಹಾಗೂ ನಗದು ಸುಲಿಗೆ ಮಾಡಿದ್ದರು. ಬಳಿಕ ಯಾರಿಗೂ ಈ ಕೃತ್ಯದ ಬಗ್ಗೆ ಮಾಹಿತಿ ನೀಡದಂತೆ ಎಚ್ಚರಿಕೆ ನೀಡಿ ಅಭಿಷೇಕನನ್ನು ಬಿಟ್ಟು ಕಳುಹಿಸಿದ್ದರು. ಈ ಸಂಬಂಧ ದಾಖಲಾಗಿದ್ದ ದೂರಿನ ಮೇರೆಗೆ ಕಾರ್ಯಾರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಆಟೋ ಚಾಲಕನ ಪುತ್ರನಾದ ಅಭಿಷೇಕ್, ವ್ಯಾಸಂಗ ಜತೆಗೆ ರಿಯಲ್ ಎಸ್ಟೇಟ್ ಕಂಪನಿಯಲ್ಲಿ ಅರೆಕಾಲಿಕ ಕೆಲಸ ಮಾಡುತ್ತಿದ್ದ. ಕಾಲೇಜಿಗೆ ಆಗಾಗ್ಗೆ ಸಹೋದರನ ಕಾರು ತೆಗೆದುಕೊಂಡು ಬರುತ್ತಿದ್ದ. ಇದನ್ನು ಕೆಲ ದಿನಗಳಿಂದ ಗಮನಿಸಿದ್ದ ಆರೋಪಿಗಳಾದ ಭುವನ್ ಮತ್ತು ಪ್ರಜ್ವಲ್, ಅಭಿಷೇಕ್ನನ್ನು ಅಪಹರಿಸಿ ಹಣ  ಸುಲಿಗೆ ಮಾಡಲು ಸಹಚರರೊಂದಿಗೆ ಸೇರಿಕೊಂಡು ಸಂಚು ರೂಪಿಸಿದ್ದರು. ಅದರಂತೆ ನ.18ರ ಬೆಳಗ್ಗೆ ಕಾರಿನಲ್ಲಿ ಕಾಲೇಜಿಗೆ ಬಂದಿದ್ದ ಅಭಿಷೇಕ್, ಇಬ್ಬರು ಸ್ನೇಹಿತರ ಜತೆ ಮಾತನಾಡಿಕೊಂಡು ನಿಂತಿದ್ದ. ಈ ವೇಳೆ ಅಭಿಷೇಕ್ ಚಲನವಲನದ ಮೇಲೆ ನಿಗಾವಹಿಸಿದ್ದ ಆರೋಪಿಗಳು, ಅಭಿಷೇಕ್ ಜತೆಯಲ್ಲಿದ್ದ ಸ್ನೇಹಿತರು ಹೋಗುತ್ತಿದಂತೆ ಇಬ್ಬರು ಮಂಕಿ ಕ್ಯಾಪ್ ಧರಿಸಿಕೊಂಡು ಬಂದು ತಲೆಗೆ ಹಲ್ಲೆ ಮಾಡಿ ಅಭಿಷೇಕ್ನ ಕಾರಿನಲ್ಲೇ ಅಪಹರಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಬಗ್ಗೆ‌ ಕ್ರಿಕೆಟ್ ದೇವರು ಸಚಿನ್ ಮಹತ್ವದ ಪೋಸ್ಟ್‌

ಧರ್ಮೇಂದ್ರ ಪ್ರಧಾನ್‌ರನ್ನು ಕೆಳಗಿಳಿಸದಿದ್ದರೆ, ಮುಂದೆ ಪ್ರಧಾನಿ ರಾಜೀನಾಮೆಯೆ ನಮ್ಮ ಡಿಮ್ಯಾಂಡ್ ಆಗಿರುತ್ತೆ: ಅಭಿಜೀತ್

ಮದುವೆಯಾದವರು ಹನಿಮೂನ್‍ಗೆ ಒಂದು ಬಾರಿ ವಿದೇಶಕ್ಕೆ ತೆರಳಿದರೆ ರಾಹುಲ್ ಗಾಂಧಿ ಪದೇಪದೇ ಹೊರದೇಶಕ್ಕೆ ಹೋಗುತ್ತಾರೆ

ಕೊತ್ವಾಲ್ ರಾಮಚಂದ್ರ ಅವರ ಶಿಷ್ಯ ಏಡ್ಸ್ ಇಂಜೆಕ್ಷನ್ ತಲಗುಲಿಸಿದ ಮೇಲೆ ಅಶೋಕ್ ಗೆ ಬುದ್ಧಿ ಭ್ರಮಣೆಯಾಗಿದೆ: ಬಿಕೆ ಹರಿಪ್ರಸಾದ್

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

ಮುಂದಿನ ಸುದ್ದಿ
Show comments