Webdunia - Bharat's app for daily news and videos

Install App

ಸಾಲ ತೀರಿಸಲು ಪ್ರಯಾಣಿಕನ ಹಣ ಕದ್ದ ಆಟೋ ಚಾಲಕ

Webdunia
ಸೋಮವಾರ, 30 ಜನವರಿ 2023 (19:37 IST)
ಪ್ರಯಾಣಿಕರು ಮರೆತುಹೋದ ವಸ್ತುಗಳನ್ನ ಆಟೋ ಚಾಲಕರು ಹಿಂದಿರುಗಿಸಿದ ಅನೇಕ ಉದಾಹರಣೆಗಳನ್ನ ನೋಡಿರುತ್ತೀರಿ. ಆದರೆ ತಾನು ಮಾಡಿಕೊಂಡಿದ್ದ ಸಾಲ ತೀರಿಸಲು ಪ್ರಯಾಣಿಕನ ಹಣದ ಬ್ಯಾಗ್ ಸಮೇತ ಪರಾರಿಯಾಗಿದ್ದ ಆಟೋ ಚಾಲಕನನ್ನ ಮಲ್ಲೇಶ್ವರಂ ಠಾಣಾ ಪೊಲೀಸರು ಬಂಧಿಸಿದ್ದಾರೆ..

ಜನವರಿ 24ರಂದು ಗಾಂಧೀ ಬಜಾರ್ ನಿಂದ ಮಲ್ಲೇಶ್ವರಂನ ಮಾರ್ಗೋಸಾ ರಸ್ತೆಯಲ್ಲಿರುವ ಕ್ಲಿನಿಕ್ ಗೆ ತೆರಳಲು ಆರೋಪಿಯ ಆಟೋ ಹತ್ತಿದ್ದ ಪ್ರಯಾಣಿಕರೊಬ್ಬರು, ತಮ್ಮ ಬ್ಯಾಗ್ ಆಟೋದಲ್ಲೇ ಇರಿಸಿ ಪಾರ್ಕಿಂಗ್ ಸ್ಥಳದಲ್ಲೇ ಸ್ವಲ್ಪ ಸಮಯ ಕಾಯುವಂತೆ ಆಟೋ ಚಾಲಕ ರಂಗಸ್ವಾಮಿಗೆ ಸೂಚಿಸಿದ್ದರು. ಪ್ರಯಾಣಿಕರ ಸೂಚನೆಗೆ ಸಮ್ಮತಿಸಿದ್ದ ಆರೋಪಿ ಅವರ ಬ್ಯಾಗಿನಲ್ಲಿದ್ದ 1.5 ಲಕ್ಷ ರೂ ಗಮನಿಸಿದ್ದ. ಸಾಲ ಮಾಡಿಕೊಂಡಿದ್ದ ಆರೋಪಿ ಹಣ ನೋಡಿದ ತಕ್ಷಣ ತನ್ನ ಸಾಲ ತೀರಿಸಬಹುದು ಎಂಬ ಆಲೋಚನೆಯಿಂದ ಬ್ಯಾಗ್ ಸಮೇತ  ಪರಾರಿಯಾಗಿದ್ದ. ಕ್ಲಿನಿಕ್ ನಿಂದ ಬಂದು ನೋಡಿದಾಗ ಬ್ಯಾಗ್ ಜೊತೆ ಆಟೋ ಚಾಲಕ ಪರಾರಿಯಾಗಿದ್ದನ್ನ ಕಂಡ ಪ್ರಯಾಣಿಕರು ಮಲ್ಲೇಶ್ವರಂ ಠಾಣೆಗೆ ದೂರು ನೀಡಿದ್ದರು.
 
ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ಕೈಗೊಂಡ ಮಲ್ಲೇಶ್ವರಂ ಠಾಣಾ ಪೊಲೀಸರು ಆಟೋ ಚಾಲಕ ರಂಗಸ್ವಾಮಿಯನ್ನ ಬಂಧಿಸಿದ್ದು, 1.5 ಲಕ್ಷ ರೂ ನಗದು, ಆಟೋ ರಿಕ್ಷಾವನ್ನ ವಶಕ್ಕೆ ಪಡೆಯಲಾಗಿದೆ ಎಂದು ಉತ್ತರ ವಿಭಾಗದ ಡಿಸಿಪಿ ವಿನಾಯಕ್ ಪಾಟೀಲ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raguvamshi murder: ಮಗನಂತೇ ನಾಟಕವಾಡಿ, ರಘುವಂಶಿ ಸಾವಿನ ದಿನ ತಬ್ಬಿ ಸಾಂತ್ವನಿಸಿದ್ದ ಆರೋಪಿ ರಾಜ್

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

ಮುಂದಿನ ಸುದ್ದಿ
Show comments