Webdunia - Bharat's app for daily news and videos

Install App

ಸಾಲ ತೀರಿಸಲು ಪ್ರಯಾಣಿಕನ ಹಣ ಕದ್ದ ಆಟೋ ಚಾಲಕ

Webdunia
ಸೋಮವಾರ, 30 ಜನವರಿ 2023 (19:37 IST)
ಪ್ರಯಾಣಿಕರು ಮರೆತುಹೋದ ವಸ್ತುಗಳನ್ನ ಆಟೋ ಚಾಲಕರು ಹಿಂದಿರುಗಿಸಿದ ಅನೇಕ ಉದಾಹರಣೆಗಳನ್ನ ನೋಡಿರುತ್ತೀರಿ. ಆದರೆ ತಾನು ಮಾಡಿಕೊಂಡಿದ್ದ ಸಾಲ ತೀರಿಸಲು ಪ್ರಯಾಣಿಕನ ಹಣದ ಬ್ಯಾಗ್ ಸಮೇತ ಪರಾರಿಯಾಗಿದ್ದ ಆಟೋ ಚಾಲಕನನ್ನ ಮಲ್ಲೇಶ್ವರಂ ಠಾಣಾ ಪೊಲೀಸರು ಬಂಧಿಸಿದ್ದಾರೆ..

ಜನವರಿ 24ರಂದು ಗಾಂಧೀ ಬಜಾರ್ ನಿಂದ ಮಲ್ಲೇಶ್ವರಂನ ಮಾರ್ಗೋಸಾ ರಸ್ತೆಯಲ್ಲಿರುವ ಕ್ಲಿನಿಕ್ ಗೆ ತೆರಳಲು ಆರೋಪಿಯ ಆಟೋ ಹತ್ತಿದ್ದ ಪ್ರಯಾಣಿಕರೊಬ್ಬರು, ತಮ್ಮ ಬ್ಯಾಗ್ ಆಟೋದಲ್ಲೇ ಇರಿಸಿ ಪಾರ್ಕಿಂಗ್ ಸ್ಥಳದಲ್ಲೇ ಸ್ವಲ್ಪ ಸಮಯ ಕಾಯುವಂತೆ ಆಟೋ ಚಾಲಕ ರಂಗಸ್ವಾಮಿಗೆ ಸೂಚಿಸಿದ್ದರು. ಪ್ರಯಾಣಿಕರ ಸೂಚನೆಗೆ ಸಮ್ಮತಿಸಿದ್ದ ಆರೋಪಿ ಅವರ ಬ್ಯಾಗಿನಲ್ಲಿದ್ದ 1.5 ಲಕ್ಷ ರೂ ಗಮನಿಸಿದ್ದ. ಸಾಲ ಮಾಡಿಕೊಂಡಿದ್ದ ಆರೋಪಿ ಹಣ ನೋಡಿದ ತಕ್ಷಣ ತನ್ನ ಸಾಲ ತೀರಿಸಬಹುದು ಎಂಬ ಆಲೋಚನೆಯಿಂದ ಬ್ಯಾಗ್ ಸಮೇತ  ಪರಾರಿಯಾಗಿದ್ದ. ಕ್ಲಿನಿಕ್ ನಿಂದ ಬಂದು ನೋಡಿದಾಗ ಬ್ಯಾಗ್ ಜೊತೆ ಆಟೋ ಚಾಲಕ ಪರಾರಿಯಾಗಿದ್ದನ್ನ ಕಂಡ ಪ್ರಯಾಣಿಕರು ಮಲ್ಲೇಶ್ವರಂ ಠಾಣೆಗೆ ದೂರು ನೀಡಿದ್ದರು.
 
ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ಕೈಗೊಂಡ ಮಲ್ಲೇಶ್ವರಂ ಠಾಣಾ ಪೊಲೀಸರು ಆಟೋ ಚಾಲಕ ರಂಗಸ್ವಾಮಿಯನ್ನ ಬಂಧಿಸಿದ್ದು, 1.5 ಲಕ್ಷ ರೂ ನಗದು, ಆಟೋ ರಿಕ್ಷಾವನ್ನ ವಶಕ್ಕೆ ಪಡೆಯಲಾಗಿದೆ ಎಂದು ಉತ್ತರ ವಿಭಾಗದ ಡಿಸಿಪಿ ವಿನಾಯಕ್ ಪಾಟೀಲ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments