ಉತ್ತರಾಖಂಡದಲ್ಲಿ ಮತ್ತೆ ಹಿಮಕುಸಿತ

Webdunia
ಶನಿವಾರ, 1 ಅಕ್ಟೋಬರ್ 2022 (20:08 IST)
ಉತ್ತರಾಖಂಡದಲ್ಲಿ ಮತ್ತೆ ಹಿಮಕುಸಿತ ಸಂಭವಿಸಿದೆ. ಇಂದು ಬೆಳಗ್ಗೆ ಹಿಮ ಹಾಲಿನ ನೊರೆಯಂತೆ ಉಕ್ಕಿ ಹರಿದಿದೆ. ಇದರಲ್ಲಿ ವಿಶ್ವಖ್ಯಾತಿಯ ಕೇದಾರನಾಥ ದೇವಾಲಯಕ್ಕೆ ಯಾವುದೇ ಹಾನಿಯಾಗಿಲ್ಲ. ಕೇದಾರನಾಥ ಕಣಿವೆಯಲ್ಲಿ ಬೃಹತ್​ ಪ್ರಮಾಣದ ಹಿಮಪಾತವಾಗಿದ್ದು, ಯಾವುದೇ ಹಾನಿ ಸಂಭವಿಸಿಲ್ಲ. ಈ ಬಗ್ಗೆ ಮಾಹಿತಿ ನೀಡಿದ ಬದರಿನಾಥ-ಕೇದಾರನಾಥ ದೇವಾಲಯ ಸಮಿತಿ ಅಧ್ಯಕ್ಷ ಅಜೇಂದ್ರ ಅಜಯ್, ಇಂದಿನ ಹಿಮಕುಸಿತದಿಂದ ಯಾವುದೇ ಹಾನಿ ಸಂಭವಿಸಿಲ್ಲ. ದೇವಾಲಯಕ್ಕೂ ಏನೂ ಆಗಿಲ್ಲ. ಬೆಳ್ಳಂಬೆಳಗ್ಗೆ ಹಿಮ ಕುಸಿಯಿತು. ಇದರಿಂದ ಹಲವೆಡೆ ಮಳೆಯಾಗಿದೆ ಎಂದು ತಿಳಿಸಿದರು. ವಾರದ ಹಿಂದಷ್ಟೇ ವಿಶ್ವವಿಖ್ಯಾತ ಕೇದಾರನಾಥ ಧಾಮ ಚೋರಬರಿ ಹಿಮನದಿಯ ಜಲಾನಯನ ಪ್ರದೇಶದಲ್ಲಿ ಹಿಮಪಾತವಾಗಿತ್ತು. ಆಗಲೂ ಯಾವುದೇ ಹಾನಿ ಸಂಭವಿಸಿರಲಿಲ್ಲ. ಬಳಿಕ ದೇವಸ್ಥಾನ ಆಡಳಿತ ಮಂಡಳಿ ಎಚ್ಚೆತ್ತುಕೊಂಡು ಭಕ್ತರಿಗೆ ದೇವಸ್ಥಾನ ಪ್ರವೇಶ ನಿಷೇಧಿಸಿತ್ತು. ಹಿಮ ಕರಗಿ ದುಮ್ಮಿಕ್ಕುತ್ತಿರುವ ದೃಶ್ಯ ಸೆರೆಯಾಗಿದೆ. ಜಾಗತಿಕ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚುತ್ತಾನೆ ಇದೆ. ಇದರ ಪರಿಣಾಮ ಹಿಮಪರ್ವತಗಳು ಕರಗಿ ನಾಶವಾಗ್ತಿದೆ. ಜಾಗತಿಕ ತಾಪಮಾನದಿಂದ ಉಂಟಾಗುವ ಅಪಾಯದ ಕುರಿತು ವಿಶ್ವಸಂಸ್ಥೆ ಎಚ್ಚರಿಸುತ್ತಲೇ ಬಂದಿದೆ. ಆದ್ರೂ ಕೂಡ ಯಾವ ದೇಶವು ಎಚ್ಚೆತ್ತಂತೆ ಕಾಣ್ತಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸರ್ಕಾರಕ್ಕೆ ಮೂರು ಪ್ರಶ್ನೆ ಮುಂದಿಟ್ಟ ಮಲ್ಲಿಕಾರ್ಜುನ ಖರ್ಗೆ

ಸಚಿವರಾಗಿ ಜವಾಬ್ದಾರಿ ವಹಿಸಿಕೊಳ್ಳುತ್ತಿದ್ದ ಹಾಗೇ ಎಂಬಿಬಿಎಸ್ ಪಾಸಾದವರಿಗೆ ಗುಡ್‌ನ್ಯೂಸ್‌ ಕೊಟ್ಟ ಯುಟಿ ಖಾದರ್‌

ನಾನೇ ಎಷ್ಟೇ ದೊಡ್ಡ ಸ್ಥಾನದಲ್ಲಿದ್ರೂ, ಇಲ್ಲಿ ಮಾತ್ರ ನಿಮ್ಮ ಮನೆ ಮಗ: ಡಿಕೆ ಶಿವಕುಮಾರ್‌

ಸಿಎಂ ಸಾಹೇಬ್ರು ಮೆಟ್ರೋದಲ್ಲಿ... ಡಿಕೆ ಶಿವಕುಮಾರ್ ನೋಡಿ ಜನರು ಫುಲ್ ಸರ್ಪೈಸ್ Video

ಬಾಯಾರಿಕೆಯೆಂದು ಬಂದ ಹಸು ಬೋರ್ ವೆಲ್ ನೋಡಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments