Webdunia - Bharat's app for daily news and videos

Install App

ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಲು ಜಾಗೃತಿ ಅಭಿಯಾನ

Webdunia
ಶನಿವಾರ, 25 ಫೆಬ್ರವರಿ 2023 (20:33 IST)
ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 18 ವರ್ಷ ತುಂಬಿದ ಎಲ್ಲಾ ಯುವಕ/ಯುವತಿಯರು ಮತದಾರರ ಪಟ್ಟಿಯಲ್ಲಿ ನೋಂದಣಿ/ಸೇರ್ಪಡೆಯಾಗುವ ಸಲುವಾಗಿ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.
 
ಅದರಂತೆ, ದಕ್ಷಿಣ ವಲಯ ಜಯನಗರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಅಪಾರ್ಟ್ ಮೆಂಟ್ ಗಳು, ರಾಗಿ ಗುಡ್ಡ ಬಳಿಯಿರುವ ಕೊಳಗೇರಿ ಪ್ರದೇಶ, ಕಾರ್ಪೊರೇಷನ್ ಕಾಲೋನಿ ಸೇರಿದಂತೆ ಇನ್ನಿತರೆ ಪ್ರದೇಶಗಳಿಗೆ ವಲಯ ಉಪ ಆಯುಕ್ತರಾದ ಶ್ರೀಮತಿ ಲಕ್ಷ್ಮೀ ದೇವಿ ರವರ ನೇತೃತ್ವದಲ್ಲಿ ಮತದಾರ ನೋಂದಣಾಧಿಕಾರಿ, ಸಹಾಯಕ‌ಮತದಾರ ನೊಂದಣಾಧಿಕಾರಿ ಸೇರಿದ ತಂಡವು ಇಂದು  ಭೇಟಿ ನೀಡಿ 18 ವರ್ಷ ತುಂಬಿದ ಯುವ ಮತದಾರರಿಗೆ ಮತದಾರರ ಪಟ್ಟಿಯಲ್ಲಿ ನೋಂದಣಿ ಮಾಡಿಕೊಳ್ಳುವಂತೆ ಜಾಗೃತಿ ಮೂಡಿಸಿದರು.
 
ಇದಲ್ಲದೆ ಬಸ್ ತಂಗುದಾಣಗಳು, ಪ್ರಮುಖ ಜಂಕ್ಷನ್ ಗಳು, ಕಾಲೇಜುಗಳಿಗೆ ಭೇಟಿ ನೀಡಿ 18 ವರ್ಷ ತುಂಬಿ ಮತದಾರರ ಪಟ್ಟಿಯಲ್ಲಿ ನೋಂದಣಿಯಾಗದೇ ಇರುವಂತಹ ಯುವಕ/ಯುವತಿಯರಿಗೆ ತಮ್ಮ ಮೊಬೈಲ್‌ನಲ್ಲಿ Voter Helpline ತಂತ್ರಾಂಶ ಅಥವಾ www.nvsp.in ವೆಬ್ ಸೈಟ್ ಗೆ ಭೇಟಿ ನೀಡಿ ನೊಂದಾಯಿಸಿಕೊಳ್ಳಬಹುದಾಗಿದೆ. ಇಲ್ಲವೇ ಪಾಲಿಕೆಯ ಕಂದಾಯ ಅಧಿಕಾರಿಗಳ ಕಛೇರಿಗೆ ಭೇಟಿ ನೀಡಿ ಪೂರಕ ದಾಖಲೆಗಳನ್ನು ನೀಡಿ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ನೊಂದಾಯಿಸಿಕೊಳ್ಳುವಂತೆ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ.
 
ಭಾರತ ಚುನಾವಣಾ ಆಯೋಗವು ನನ್ನ ಮತ ನನ್ನ ಹಕ್ಕು ಘೋಷವಾಕ್ಯದಡಿ ಎಲ್ಲಾ ಯುವ ಮತದಾದರು ಮತ ಚಾಲಾಯಿಸಬೇಕೆಂಬ ಉದ್ದೇಶದಿಂದ ಹೆಚ್ಚು-ಹೆಚ್ಚು ಜಾಗೃತಿ ಅಭಿಯಾನಗಳನ್ನು ಹಮ್ಮಿಕೊಂಡು ಯುವ ಮತದಾರರಲ್ಲಿ ಮತ ಚಾಲಾಯಿಸುವಂತೆ ಅರಿವು ಮೂಡಿಸುವ ಕೆಲಸ ಮಾಡುತ್ತಿದೆ. ಜೊತೆಗೆ ಕಸ ಸಂಗ್ರಹಿಸುವ ಆಟೋ ಟಿಪ್ಪರ್ ಗಳು ಹಾಗೂ ಆಟೋ ಗಳಲ್ಲಿ ಧ್ವನಿವರ್ಧಕಗಳ ಮೂಲಕ ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಲು ಅರಿವು ಮೂಡಿಸಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments