Webdunia - Bharat's app for daily news and videos

Install App

ವಿದೇಶಿಯರಿಗೆ, ಅನ್ಯ ರಾಜ್ಯದವರಿಗೆ ಕನ್ನಡ ಧ್ವಜ ನೀಡಿ ಜಾಗೃತಿ

Webdunia
ಸೋಮವಾರ, 1 ನವೆಂಬರ್ 2021 (20:29 IST)
ಮೈಸೂರು:-ಮೈಸೂರು ರಕ್ಷಣಾ ವೇದಿಕೆ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಗರದ ಗೋಕುಲಂನಲ್ಲಿನ ವಿದೇಶಿಯರಿಗೆ ಹಾಗೂ ಅನ್ಯಭಾಷಿಕ ಟೆಕ್ಕಿಗಳಿಗೆ ಸಿಹಿ ವಿತರಿಸಿ, ಕನ್ನಡ ಧ್ವಜ ನೀಡಲಾಯಿತು.
ನಂತರ ಕರ್ನಾಟಕ ರಾಜ್ಯ ಸ್ಥಾಪನೆ, ಈ ಹಿಂದೆ ಆಳಿದವರ ಇತಿಹಾಸ ಹಾಗೂ ನಾಡಿನ ಪರಂಪರೆ ಬಗ್ಗೆ ತಿಳಿಸಲಾಯಿತು.
ಈ ವೇಳೆ ಮಾತನಾಡಿದ ಇಂಗ್ಲೆಂಡಿನ ಎಲಿನಾ “ಕರ್ನಾಟಕ ಅತ್ಯಂತ ಸುಂದರ ನಾಡು. ಹಲವಾರು ವರ್ಷಗಳಿಂದ ಮೈಸೂರಿನೊಂದಿಗೆ ಒಡನಾಟ ಹೊಂದಿದ್ದು, ಇಲ್ಲಿನ ಜನ ಬಹಳ ಒಳ್ಳೆಯ ಮನಸ್ಸಿನವರು. ಇಂದು ಕನ್ನಡದ ಹಬ್ಬದಲ್ಲಿ ಭಾಗಿಯಾಗಿರುವುದು ಬಹಳ ಸಂತೋಷವಾಗಿದೆ. ಎಲ್ಲರಿಗೂ ಕರ್ನಾಟಕ ರಾಜ್ಯೋತ್ಸವದ ಶುಭಾಶಯ” ಎಂದು ತಿಳಿಸಿದರು.
ವಿದೇಶಿಯರು ಸಹ ಸಂಭ್ರಮಿಸಿ, ಭಾಗವಹಿಸಿ ಶುಭಾಶಯ ಕನ್ನಡಿಗರಿಗೆ ಶುಭಾಶಯ ಕೋರಿದ್ದು ವಿಶೇಷವಾಗಿತ್ತು. ಕೇರಳ, ಆಂಧ್ರ ಹಾಗೂ ತಮಿಳುನಾಡಿನ ಟೆಕ್ಕಿಗಳು ಸಹ ಭಾಗಿಯಾಗಿದ್ದು ಕಾರ್ಯಕ್ರಮಕ್ಕೆ ಕಳೆ ನೀಡಿತು.
ಮೈಸೂರು ರಕ್ಷಣಾ ವೇದಿಕೆ ಪ್ರಧಾನ ಕಾರ್ಯದರ್ಶಿ ರಾಕೇಶ್ ಭಟ್, ಕೆಂಪೇಗೌಡ ಸಹಕಾರಿ ಸಂಘ ಅಧ್ಯಕ್ಷ ಗಂಗಾಧರ ಗೌಡ, ಸಾಮಾಜಿಕ ಹೋರಾಟಗಾರ ವಿಕ್ರಂ ಅಯ್ಯಂಗಾರ್, ಜೀವಧಾರ ಪದವಿ ಕ್ಷೇತ್ರದ ಕಾರ್ಯದರ್ಶಿ ವರಲಕ್ಷ್ಮಿ ಅಜಯ್, ನವೀನ್ ಕೆಂಪಿ, ಗೋಕುಲಂನ ಪ್ರಸಿದ್ದ ಚಕ್ರ ಹೌಸ್ ನ ರಾಜೇಶ್, ಮಂಜು, ಇಂಗ್ಲೆಂಡಿನ ಎಲೆನಾ, ಉತ್ತರ ಪ್ರದೇಶದ ಆಯುಷಿ, ಶೀತಲ್, ಚಿರಾಗ್, ಋಷಿಕ, ಕೇರಳದ ಗೋಕುಲ್, ಗೋವಾದ ಹೆಲೆನ್, ಚಂದ್ರಕಾಂತ್ ಸೇರಿದಂತೆ ಹಲವರು ಭಾಗವಹಿಸಿದ್ದರು.
Photo Courtesy: Google

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ರೈಲಿನಲ್ಲಿ ಮಹಿಳೆಯರ ಮುಂದೆ ನಿಂತು ಪ್ಯಾಂಟ್ ಜಿಪ್ ತೆರೆದು ನಿಂತ ಯುವಕ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಮುಂದಿನ ಸುದ್ದಿ
Show comments