Publish Date: Thu, 07 Nov 2019 (20:30 IST)
Updated Date: Thu, 07 Nov 2019 (20:31 IST)
ಅಯೋಧ್ಯೆ ಪ್ರಕರಣದ ತೀರ್ಪು ಹೊರಬರೋಕೆ ಕ್ಷಣಗಣನೆ ಆರಂಭಗೊಂಡಿರುವಂತೆ ದೇಶಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಕಟ್ಟೆಚ್ಚರ ವಹಿಸಲಾಗಿದೆ.
ತೀರ್ಪು ಬಂದ ಬಳಿಕ ಯಾವುದೇ ರೀತಿಯಲ್ಲಿ ಕಾನೂನು ಸುವ್ಯವಸ್ಥೆ ದಾರಿತಪ್ಪದ ರೀತಿಯಲ್ಲಿ ಸಕಲ ವ್ಯವಸ್ಥೆ ಕೈಗೊಳ್ಳಲಾಗುತ್ತಿದೆ.
ಅಯೋಧ್ಯೆಯಲ್ಲಿ ಭಾರೀ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. 144 ಜಾರಿಗೊಳಿಸಲಾಗಿದೆ.
ವಿವಿಧ ಕಾಲೇಜುಗಳಲ್ಲಿ ತಾತ್ಕಾಲಿಕ ಜೈಲುಗಳನ್ನು ಸ್ಥಾಪಿಸಲಾಗಿದೆ.
ಮುಂಬೈ, ದೆಹಲಿ ಸೇರಿದಂತೆ ಪ್ರಮುಖ ಕೇಂದ್ರಗಳಲ್ಲಿ ಕಟ್ಟೆಚ್ಚರಕ್ಕೆ ಕೇಂದ್ರ ಸೂಚನೆ ನೀಡಿದೆ.