Webdunia - Bharat's app for daily news and videos

Install App

ಅಯ್ಯಪ್ಪಸ್ವಾಮಿ ದರ್ಶನಕ್ಕೆ ಮುಂದಾದ ಮಹಿಳೆಯರು!

Webdunia
ಸೋಮವಾರ, 24 ಡಿಸೆಂಬರ್ 2018 (15:01 IST)
ಶಬರಿಮಲೆ ಅಯ್ಯಪ್ಪ ಸ್ವಾಮಿಯ ದರ್ಶನಕ್ಕಾಗಿ ದೇಗುಲ ಪ್ರವೇಶಿಸುವ ಪ್ರಯತ್ನವಾಗಿ 11 ಮಹಿಳೆಯರು ಪಂಪಾ ನೆಲೆಗೆ ಬಂದು ತಂಗಿದ್ದಾರೆ. ಇದರಿಂದ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.
ಮಹಿಳೆಯರು ಅಯ್ಯಪ್ಪ ದರ್ಶನ ಪಡೆಯಲು ಮುಂದಾಗಿರುವ ಈ ಪ್ರಯತ್ನದ ವಿರುದ್ಧ ಭಕ್ತಾದಿಗಳ ಪ್ರತಿಭಟನೆಯೂ ಮುಂದುವರೆದಿದೆ.

ದೇಗುಲಕ್ಕೆ 5 ಕಿ.ಮೀ. ದೂರದಿಂದ ಅರಣ್ಯದಿಂದ ಕೂಡಿದ ಸಾಂಪ್ರದಾಯಿಕ ಮಾರ್ಗವಾಗಿ ಇವರು ಅಯ್ಯಪ್ಪ ಮಂದಿರದತ್ತ ಚಾರಣ ಆರಂಭಿಸಿದರೂ ಸಹ ಮಾರ್ಗಮಧ್ಯೆ ಅಯ್ಯಪ್ಪನಾಮ ಜಪಮಾಡುತ್ತಿರುವ ಪ್ರತಿಭಟನಾಕಾರರನ್ನು ಎದುರಿಸಬೇಕಾಗಿರುವುದರಿಂದ ಅವರು ಮುಂದುವರೆಯುವುದು ಅಸಾಧ್ಯವಾಗಲಿದೆ. ಚೆನ್ನೈ ಮೂಲದಮಾನಿತಿಸಂಘಟನೆಗೆ ಸೇರಿದ ಮಹಿಳೆಯರು ರಸ್ತೆಯಲ್ಲೇ ನಿಲ್ಲಬೇಕಾಗಿ ಬಂದಿದೆ. ಪೊಲೀಸರು ಭದ್ರತೆಗಾಗಿ ಅವರನ್ನು ಸುತ್ತುವರೆದಿದ್ದಾರೆ.
11 ಮಹಿಳೆಯರ ಪೈಕಿ ಆರು ಮಹಿಳೆಯರು ಮಧುರೈನಿಂದ ರಸ್ತೆ ಮಾರ್ಗವಾಗಿ ಪೊಲೀಸ್ ಭದ್ರತೆಯೊಂದಿಗೆ ತಮ್ಮ ಪ್ರಯಾಣ ಆರಂಭಿಸಿದ್ದರು. ಪಶ್ಚಿಮ ಘಟ್ಟಗಳಲ್ಲಿ ನೆಲೆಸಿರುವ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ 5 ಕಿ.ಮೀ. ದೂರದ ಪಂಪಾಗೆ ಬೆಳಗಿನ ಝಾವ 3.30ಕ್ಕೆ ಅವರು ಬಂದು ಸೇರಿದ್ದರು. ಇನ್ನಿತರ ಐವರು ಮಹಿಳೆಯರು ಅವರೊಂದಿಗೆ ಸೇರಿಕೊಂಡಿದ್ದಾರೆ.

ಅಯ್ಯಪ್ಪ ಸ್ವಾಮಿ ದರ್ಶನ ಪಡೆದು ಪೂಜೆ ಸಲ್ಲಿಸುವವರೆಗೂ ನಾವು ನಮ್ಮ ಹೋರಾಟ ಮುಂದುವರೆಸುತ್ತೇವೆ. ಭದ್ರತಾ ಕಾರಣಗಳಿಗಾಗಿ ಹಿಂದಿರುಗಬೇಕೆಂದು ಪೊಲೀಸರು ನಮಗೆ ಕೇಳಿಕೊಂಡಿದ್ದಾರೆ. ಆದರೆ ನಾವು ಹಿಂದಿರುಗುವುದಿಲ್ಲಎಂದು ಮಹಿಳೆಯರು ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments