Webdunia - Bharat's app for daily news and videos

Install App

ಜೈಲು ಸೇರಿದ್ದ ಬಿ ನಾಗೇಂದ್ರಗೆ ಮತ್ತೇ ಒಲಿಯುತ್ತಾ ಸಚಿವ ಸ್ಥಾನ: ಸಿಎಂ ನೀಡಿದ ಸುಳಿವೇನು

Sampriya
ಮಂಗಳವಾರ, 12 ನವೆಂಬರ್ 2024 (18:53 IST)
Photo Courtesy X
ಮೈಸೂರು: ವಾಲ್ಮೀಕಿ ಮಂಡಳಿ ಹಗರಣ ಪ್ರಕರಣದಲ್ಲಿ ಜೈಲು ಸೇರಿ ಜಾಮೀನು ಅಡಿಯಲ್ಲಿ ಹೊರಬಂದಿರುವ ಶಾಸಕ ಬಿ ನಾಗೇಂದ್ರಗೆ ಮತ್ತೇ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವ ಸಾಧ್ಯತೆಯಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೇ ಮುನ್ಸೂಚನೆಯನ್ನು ನೀಡಿದ್ದಾರೆ.

ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆಯಲ್ಲಿ ಇಂದು ಸುಮಾರು 443.64 ಕೋಟಿ ರೂಪಾಯಿ ವೆಚ್ಚದ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ನೆರೆದಿದ್ದ ಬೆಂಬಲಿಗರು ಮತ್ತು ನಾಯಕ ಸಮುದಾಯದವರಿಗೆ ಭರವಸೆ ನೀಡಿ ಮಾತನಾಡಿದ ಅವರು, ನಾಗೇಂದ್ರ ಅವರಿಗೆ ಶೀಘ್ರದಲ್ಲೇ ಸಚಿವ ಸ್ಥಾನ ನೀಡಲಾಗುವುದು ಎಂದು ಹೇಳಿದರು.

ಹೆಚ್.ಡಿ.ಕೋಟೆ ಶಾಸಕ ಸಿ.ಅನಿಲ್ ಕುಮಾರ್ ಅವರಿಗೆ ಸಚಿವ ಸ್ಥಾನ ನೀಡುವಂತೆ ನಾಯಕ ಸಮುದಾಯದವರ ಬೇಡಿಕೆಗೆ ಸ್ಪಂದಿಸಿದ ಸಿದ್ದರಾಮಯ್ಯ ಈ ಮಾತುಗಳನ್ನಾಡಿದ್ದಾರೆ. ನಾಯಕ ಸಮುದಾಯದ ಬೆಂಬಲಿಗರು ಎಚ್‌ಡಿ ಕೋಟೆ ಶಾಸಕ ಸಿ ಅನಿಲ್ ಕುಮಾರ್ ಅವರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸುವಂತೆ ಒತ್ತಾಯಿಸಿದರು.

ತಮ್ಮ ಆದ್ಯತೆ ನಾಗೇಂದ್ರ ಅವರನ್ನು ಸಂಪುಟಕ್ಕೆ ಮರುಸೇರ್ಪಡೆ ಮಾಡುವುದಾಗಿದ್ದು, ಮುಂದಿನ ದಿನಗಳಲ್ಲಿ ಅನಿಲ್ ಅವರಿಗೂ ಸೂಕ್ತ ಸ್ಥಾನಮಾನ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಣ ಅವ್ಯವಹಾರ ಸಂಬಂಧ ಸಚಿವ ನಾಗೇಂದ್ರ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಈಚೆಗೆ ಜಾಮೀನನ ಮೇಲೆ ಬಿಡುಗಡೆಯಾಗಿರುವ ನಾಗೇಂದ್ರ ಅವರಿಗೆ ಉಪಚುನಾವಣೆ ಮುಗಿದ ಬೆನ್ನಲ್ಲೇ ಮತ್ತೇ ಸಚಿವ ಸ್ಥಾನ ಸಿಗುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments