Select Your Language

Notifications

webdunia
webdunia
webdunia
webdunia

ಯಡಿಯೂರಪ್ಪ ಸುತ್ತಮುತ್ತ ಸಜ್ಜನರಿಲ್ಲ: ಸೊಗಡು ಶಿವಣ್ಣ

ಯಡಿಯೂರಪ್ಪ ಸುತ್ತಮುತ್ತ ಸಜ್ಜನರಿಲ್ಲ: ಸೊಗಡು ಶಿವಣ್ಣ
ಬೆಂಗಳೂರು , ಶುಕ್ರವಾರ, 13 ಜನವರಿ 2017 (15:33 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಸುತ್ತಮುತ್ತ ಸಜ್ಜನರಿಲ್ಲ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಹೇಳಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಎಸ್.ಯಡಿಯೂರಪ್ಪನವರಿಗಾಗಿ ನಾವು ಎಲ್ಲವನ್ನೂ ತ್ಯಾಗಮಾಡಿದ್ದೇವೆ. ಅವರಿಗೆ ನಾವು ಎಂದಿಗೂ ದ್ರೋಹ ಮಾಡುವವರಲ್ಲ. ನಿಮ್ಮ ಸುತ್ತಮುತ್ತ ಸಜ್ಜನರಿಲ್ಲ. ಸಜ್ಜನರ ಸಹವಾಸ ಮಾಡಿ ಎಂದರು. 
 
ರಾಜ್ಯ ಬಿಜೆಪಿ ಪಾಳಯದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತದೆ ಎಂಬ ಕಾರಣಕ್ಕಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಹೆಸರಿನ ಹೊಸ ಸಂಘಟನೆ ಹುಟ್ಟು ಹಾಕುವ ಮೂಲಕ ಪಕ್ಷದಲ್ಲಿ ತಮ್ಮ ಬಲ ಪ್ರದರ್ಶನ ಮಾಡಲು ಕೆ.ಎಸ್.ಈಶ್ವರಪ್ಪ ಮುಂದಾಗಿದ್ದರು.
 
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರ ಕಿತ್ತಾಟ ತಾರಕಕ್ಕೇರಿದ್ದು, ರಾಜ್ಯ ಬಿಜೆಪಿ ಪಾಳಯದಲ್ಲಿ ಎಲ್ಲವೂ ಸರಿಯಾಗಿಲ್ಲ ಎಂದು ಸಾಬೀತಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮದುವೆ ಆಗದಿದ್ರೆ ಕಿಡ್ನಾಪ್: ಪ್ರಿಯಕರನ ಬೆದರಿಕೆಯಿಂದ ವಿದ್ಯಾರ್ಥಿನಿ ಆತ್ಮಹತ್ಯೆ!