Webdunia - Bharat's app for daily news and videos

Install App

ಕಲ್ಯಾಣ ಕರ್ನಾಟಕದಲ್ಲಿ ವಿಮಾನ ಹಾರಿಸಿದ ಬಿ.ಎಸ್. ಯಡಿಯೂರಪ್ಪ

Webdunia
ಶುಕ್ರವಾರ, 22 ನವೆಂಬರ್ 2019 (18:27 IST)
ಕಲ್ಯಾಣ ಕರ್ನಾಟಕದಲ್ಲಿ ವಿಮಾನ ನಿಲ್ದಾಣ ಸ್ಥಾಪನೆಯಿಂದ ರಾಜ್ಯದ ಈಶಾನ್ಯ ಭಾಗವು ವಿಮಾನಯಾನ ಸಂಪರ್ಕಕ್ಕೆ ಬಂದಿರುವುದರಿಂದ ದೇಶ, ವಿದೇಶದಿಂದ ಉದ್ಯಮಿಗಳು ಇಲ್ಲಿ ಹಣ ಹೂಡಿಕೆ ಮಾಡಲಿದ್ದಾರೆ.

ಕಲ್ಯಾಣ ಕರ್ನಾಟಕ ಅಭಿವೃದ್ಧಿಯಲ್ಲಿ ಈ ವಿಮಾನ ನಿಲ್ದಾಣ ಹೊಸ ಅಧ್ಯಾಯ ನಿರ್ಮಿಸಲಿದೆ ಎಂದು ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ರು.

ಕಲಬುರಗಿ ವಿಮಾನ ನಿಲ್ದಾಣ ಆವರಣದಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ, ಏರ್‍ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ಹಾಗೂ ಕರ್ನಾಟಕ ಮೂಲಸೌಲಭ್ಯ ಅಭಿವೃದ್ಧಿ ಇಲಾಖೆಯು ಜಂಟಿಯಾಗಿ ಆಯೋಜಿಸಿದ್ದ ಕಲಬುರಗಿ ವಿಮಾನ ನಿಲ್ದಾಣ ಲೋಕಾರ್ಪಣೆಗೊಳಿಸಿದ್ರು.

ನಮ್ಮ ಸರ್ಕಾರ ಬಂದ ಕೂಡಲೆ ಇಲ್ಲಿನ ಜನರ ಆಸೆಗೆ ಅನುಗುಣವಾಗಿ ಪ್ರದೇಶಕ್ಕೆ ದಾಸ್ಯ ಪದವಾಗಿದ್ದ “ಹೈದ್ರಾಬಾದ ಕರ್ನಾಟಕ” ಎಂಬುದನ್ನು “ಕಲ್ಯಾಣ ಕರ್ನಾಟಕ” ಎಂದು ಮರುನಾಮಕರಣ ಮಾಡಲಾಯಿತು. 2008ರಲ್ಲಿ ನನ್ನಿಂದಲೆ ಅಡಿಗಲ್ಲು ಹಾಕಿದ ಕಲಬುರಗಿ ವಿಮಾನ ನಿಲ್ದಾಣ ಇಂದು ಲೋಕಾರ್ಪಣೆ ಮಾಡುತ್ತಿದ್ದು, ಯಾವುದೋ ಜನ್ಮದ ಪುಣ್ಯದ ಫಲವಾಗಿದೆ ಎಂದರು.
 742-23 ಎಕರೆ ಪ್ರದೇಶದಲ್ಲಿ ರಾಜ್ಯ ಸರ್ಕಾರವೆ ಸಂಪೂರ್ಣವಾಗಿ ಅಭಿವೃದ್ಧಿಪಡಿಸಿರುವ ಕಲಬುರಗಿಯ ಹಸಿರು ವಿಮಾನ ನಿಲ್ದಾಣಕ್ಕೆ ಇಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯು 58.52 ಕೋಟಿ ರೂ. ಅನುದಾನ ನೀಡುವುದರ ಮೂಲಕ ಹಿಂದುಳಿದ ಪ್ರದೇಶದ ಅಭಿವೃದ್ಧಿಗೆ ಅದು ಶ್ರಮಿಸುತ್ತಿದೆ.

3.175 ಕಿ.ಮಿ. ಉದ್ದದ ರನ್ವೆ ಹೊಂದಿರುವ ಕಲಬುರಗಿ ವಿಮಾನ ನಿಲ್ದಾಣ ರಾಜ್ಯದ 2ನೇ ಹಾಗೂ ದೇಶದ 10ನೇ ಅತಿ ಉದ್ದದ ರನ್ ವೇ ಇದಾಗಿದೆ. ದೇಶಕ್ಕೆ ಶೇ.30ರಷ್ಟು ತೊಗರಿ ಉತ್ಪಾದಿಸುವ ಮತ್ತು ಸಿಮೆಂಟ್ ರಫ್ತಿನಿಂದಲೆ ಕಲಬುರಗಿ ಜಿಲ್ಲೆ ವಿಶ್ವದಾದ್ಯಂತ ಗಮನ ಸೆಳೆದಿದೆ. ಹೀಗಾಗಿ ಇಲ್ಲಿನ ವಿಮಾನ ನಿಲ್ದಾಣವನ್ನು ಭವಿಷ್ಯದಲ್ಲಿ  ಸರಕು ಸಾಗಣೆಗೂ ಬಳಸಿಕೊಳ್ಳುವಂತೆ ನಾನು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತೇನೆ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments