Select Your Language

Notifications

webdunia
webdunia
webdunia
webdunia

ಸಿಬಿಐ ನ್ಯಾಯಾಲಯದಿಂದ ಕ್ಲೀನ್‌ಚಿಟ್: ದೆಹಲಿಗೆ ತೆರಳಿದ ಯಡಿಯೂರಪ್ಪ

ಸಿಬಿಐ ನ್ಯಾಯಾಲಯದಿಂದ ಕ್ಲೀನ್‌ಚಿಟ್: ದೆಹಲಿಗೆ ತೆರಳಿದ ಯಡಿಯೂರಪ್ಪ
ಬೆಂಗಳೂರು , ಶುಕ್ರವಾರ, 28 ಅಕ್ಟೋಬರ್ 2016 (12:05 IST)
ಕಿಕ್ ಬ್ಯಾಕ್ ಪ್ರಕರಣದಲ್ಲಿ ಸಿಬಿಐ ವಿಶೇಷ ನ್ಯಾಯಾಲಯದಿಂದ ಕ್ಲೀನ್‌ಚಿಟ್ ಸಿಕ್ಕ ಹಿನ್ನೆಲೆಯಲ್ಲಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೈಕಮಾಂಡ್ ಭೇಟಿ ಮಾಡಲು ದೆಹಲಿಗೆ ತೆರಳಿದ್ದಾರೆ. 
 
ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಠ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ರಾಮಲಾಲ್ ಅವರನ್ನು ಭೇಟಿಯಾಗಿ ಭ್ರಷ್ಟಾಚಾರ ಪ್ರಕರಣದಿಂದ ದೋಷಮುಕ್ತವಾದ ಕುರಿತು ಬಿಎಸ್‌ವೈ ಮಾಹಿತಿ ನೀಡಲಿದ್ದಾರೆ. 
 
ಈ ವೇಳೆ ಪಕ್ಷ ಸಂಘಟನೆ ಬಗ್ಗೆಯೂ ಚರ್ಚೆ ನಡೆಸಲಿದ್ದು, ಬಿ.ಎಸ್.ಯಡಿಯೂರಪ್ಪನವರಿಗೆ ಅರವಿಂದ ಲಿಂಬಾವಳಿ ಸಾಥ್ ನೀಡಿದ್ದಾರೆ. 

ಕಿಕ್ ಬ್ಯಾಕ್ ಪ್ರಕರಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಎಲ್ಲಾ ಆರೋಪಿಗಳು ದೋಷಮುಕ್ತರೆಂದು ಸಿಬಿಐ ವಿಶೇಷ ಕೋರ್ಟ್ ತೀರ್ಪು ನೀಡಿತ್ತು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ವೃದ್ಧೆಯನ್ನು ಮೇಲಕ್ಕೆ ಚಿಮ್ಮಿದ ಕೊಬ್ಬಿದ ಗೂಳಿ(ವೈರಲ್ ವಿಡಿಯೋ)