ಬಿಎಸ್‌ವೈ ಬುಸ್ ಬುಸ್ ಹಾವು ಬಿಡುವುದರಲ್ಲಿ ನಿಸ್ಸೀಮರು: ಎಂ.ಬಿ.ಪಾಟೀಲ್

Webdunia
ಶನಿವಾರ, 2 ಡಿಸೆಂಬರ್ 2017 (20:44 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ  ಬುಸ್ ಬುಸ್ ಹಾವು ಬಿಡುವುದರಲ್ಲಿ ನಿಸ್ಸೀಮರು ಎಂದು ನೀರಾವರಿ ಖಾತೆ ಸಚಿವ ಎಂ.ಬಿ.ಪಾಟೀಲ್ ಲೇವಡಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಲಸಂಪನ್ಮೂಲ ಇಲಾಖೆಯಲ್ಲಿ ಯಾವುದೇ ಹಗರಣಗಳೇ ನಡೆದಿಲ್ಲ. ಹಗರಣಗಳು ನಡೆದಿಲ್ಲವೆಂದಾದ ಮೇಲೆ ಯಾವ ದಾಖಲೆಗಳನ್ನು ಬಿಡುಗಡೆ ಮಾಡ್ತಾರೆ? ದಿನನಿತ್ಯ ಹಗರಣ ದಾಖಲೆಗಳನ್ನು ಬಿಡುಗಡೆ ಮಾಡ್ತೇನೆ ಎಂದು ಪೂಸಿ ಬಿಡುತ್ತಾ ರಾಜಕೀಯ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
 
ತಿಕೋಟಾದಲ್ಲಿ ನನ್ನ ವಿರುದ್ಧ ಇಂದು ಹಗರಣ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ ಎಂದು ಯಡಿಯೂರಪ್ಪ ಗುಟುರು ಹಾಕಿದ್ದರು. ಆದರೆ, ಇದೀಗ ಜನೆವರಿಯಲ್ಲಿ ಬಿಡುಗಡೆ ಮಾಡ್ತೇನೆ ಎಂದು ಹೇಳ್ತಾರೆ. ಇದ್ರೆ ತಾನೇ ಬಿಡುಗಡೆ ಮಾಡೋಕೆ ಎಂದು ಕಿಡಿಕಾರಿದರು.
 
ಸಿಎಂ ಸಿದ್ದರಾಮಯ್ಯ ಸೇರಿದಂತೆ ಪ್ರತಿಯೊಬ್ಬರ ದಾಖಲೆಗಳನ್ನು ಬಿಡುಗಡೆ ಮಾಡ್ತೇನೆ ಎಂದು ಹಲವು ವರ್ಷಗಳಿಂದ ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಆದರೆ, ಇಲ್ಲಿಯವರೆಗೆ ಒಂದೇ ಒಂದು ದಾಖಲೆ ಬಿಡುಗಡೆ ಮಾಡಿಲ್ಲ. ತಾಕತ್ತಿದ್ರೆ ಬಿಡುಗಡೆ ಮಾಡಲಿ ಎಂದು ನೀರಾವರಿ ಖಾತೆ ಸಚಿವ ಎಂ.ಬಿ.ಪಾಟೀಲ್ ಸವಾಲ್ ಹಾಕಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Big Breaking: ಆಲ್ ಫಲಾಹ್ ಗ್ರೂಪ್‌ನ ಅಧ್ಯಕ್ಷ 13ದಿನ ಇಡಿ ಕಸ್ಟಡಿಗೆ

ಸ್ಫೋಟಕ್ಕೂ ಮುನ್ನಾ ಮನೆಗೆ ಭೇಟಿ ಕೊಟ್ಟ ಬಾಂಬರ್‌ ಉಮರ್ ಮಾಡಿದ್ದೇನು ಗೊತ್ತಾ

Karnataka Weather, ಚಳಿಯ ಜತೆಗೆ ರಾಜ್ಯದ ಈ ಭಾಗದಲ್ಲಿ ಇಂದು, ನಾಳೆ ಮಳೆ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

ಮುಂದಿನ ಸುದ್ದಿ
Show comments