Select Your Language

Notifications

webdunia
webdunia
webdunia
webdunia

ದೇಶದಲ್ಲಿಯೇ ಯಡಿಯೂರಪ್ಪ ಮಹಾನ್ ಭ್ರಷ್ಟ: ಸಿಎಂ ಸಿದ್ದರಾಮಯ್ಯ ತಿರುಗೇಟು

ದೇಶದಲ್ಲಿಯೇ ಯಡಿಯೂರಪ್ಪ ಮಹಾನ್ ಭ್ರಷ್ಟ: ಸಿಎಂ ಸಿದ್ದರಾಮಯ್ಯ ತಿರುಗೇಟು
ಬೆಂಗಳೂರು , ಸೋಮವಾರ, 20 ಫೆಬ್ರವರಿ 2017 (16:38 IST)
ದೇಶದಲ್ಲಿಯೇ ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮಹಾನ್ ಭ್ರಷ್ಟ. ಆದ್ದರಿಂದಲೇ 20 ಕೇಸ್‌ಗಳನ್ನು ಎದುರಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಒಂದು ವೇಳೆ, ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದ್ರೆ ಭ್ರಷ್ಟಾಚಾರವೆಸಗಿರುವ ಸಿಎಂ ಸಿದ್ದರಾಮಯ್ಯ ಮತ್ತು ಅವರ ಸಹದ್ಯೋಗಿಗಳನ್ನು ಜೈಲಿಗೆ ಕಳುಹಿಸುತ್ತೇನೆ ಎಂದು ಯಡಿಯೂರಪ್ಪ ಗುಡುಗಿದ್ದರು.
 
ಯಡಿಯೂರಪ್ಪ ಹೇಳಿಕೆಗೆ ಖಾರವಾಗಿ ಪ್ರತಿದಾಳಿ ನಡೆಸಿರುವ ಸಿಎಂ ಸಿದ್ದರಾಮಯ್ಯ, ದೇಶದಲ್ಲಿ ಯಾರಾದರೂ ಅತಿ ಭ್ರಷ್ಟರಾಗಿದ್ದಾರೆ ಎಂದರೆ ಅದು ಮಿಸ್ಟರ್ ಯಡಿಯೂರಪ್ಪ. ಅವರು ಅಧಿಕಾರಕ್ಕೆ ಬಂದ್ರೆ ತಾನೇ ಎಂದು ಲೇವಡಿ ಮಾಡಿದ್ದಾರೆ.
 
ಯಡಿಯೂರಪ್ಪ ಮತ್ತು ಅನಂತ್ ಕುಮಾರ್ ತಮ್ಮದೇ ಭ್ರಷ್ಟಾಚಾರವನ್ನು ಲೈವ್ ವಿಡಿಯೋದಲ್ಲಿ ಬಹಿರಂಗಪಡಿಸಿದ್ದಾರೆ. ಇದಕ್ಕಿಂತ ಮತ್ತೊಂದು ಸಾಕ್ಷ್ಯ ಬೇಕಾಗಿಲ್ಲ. ಇಂತಹವರಿಗೆ ಇನ್ನೊಬ್ಬರ ಬಗ್ಗೆ ಮಾತನಾಡಲು ಯಾವ ನೈತಿಕತೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಮಾಯಾವತಿ ಬಳಿ ಅಕ್ರಮ ಹಣ ಸಂಗ್ರಹ: ಪ್ರಧಾನಿ ಮೋದಿ ಆರೋಪ