Select Your Language

Notifications

webdunia
webdunia
webdunia
webdunia

ಸಿಎಂ ಸಿದ್ದರಾಮಯ್ಯಗೆ ಶ್ರೀರಾಮುಲು ಬಹಿರಂಗ ಸವಾಲು

ಸಿಎಂ ಸಿದ್ದರಾಮಯ್ಯಗೆ ಶ್ರೀರಾಮುಲು ಬಹಿರಂಗ ಸವಾಲು
ಬಾಗಲಕೋಟೆ , ಸೋಮವಾರ, 30 ಏಪ್ರಿಲ್ 2018 (09:30 IST)
ಬಾಗಲಕೋಟೆ: ಬಾದಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಎದುರಾಳಿಯಾಗಿ ಕಣಕ್ಕಿಳಿದಿರುವ ಬಿಜೆಪಿ ನಾಯಕ ಶ್ರೀರಾಮುಲು ಬಹಿರಂಗ ಸವಾಲು ಹಾಕಿದ್ದಾರೆ.

ಮೋದಿ ಸರ್ಕಾರ ಭ್ರಷ್ಟ ಸರ್ಕಾರ ಎಂದು ಟಾಂಗ್ ಕೊಟ್ಟ ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಚರ್ಚೆಗೆ ಬರುವಂತೆ ರಾಮುಲು ಸವಾಲು ಹಾಕಿದ್ದಾರೆ.

ಕಾಂಗ್ರೆಸ್ ಅವಧಿಯಲ್ಲಿ ಎಷ್ಟು ಹಗರಣವಾಗಿದೆ ಎಂದು ನೋಡೋಣ. ಬಹಿರಂಗವಾಗಿ ಚರ್ಚೆಯಾಗಲಿ. ಅದಕ್ಕೆ ಪ್ರಧಾನಿ ಮೋದಿ ಬೇಡ. ನಾನೇ ಬರುತ್ತೇನೆ. ಚರ್ಚೆ ಮಾಡೋಣ ಎಂದು ರಾಮುಲು ಸವಾಲು ಹಾಕಿದ್ದಾರೆ.

ಇದೇ ವೇಳೆ ಸಿಎಂ ಸಿದ್ದರಾಮಯ್ಯಗೆ ಅಧಿಕಾರ ಸಿಕ್ಕಿದಾಗ ತಲೆಗೆ ಅಹಂಕಾರ ಏರಿದೆ. ಅಧಿಕಾರ ಇಲ್ಲದೇ ಇದ್ದಾಗ ಸರಿಯಾಗಿಯೇ ಇದ್ದರು. ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ರಾಮುಲು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಬಾದಾಮಿಯಲ್ಲೇ ಮನೆ ಮಾಡಲು ಶ್ರೀರಾಮುಲು ಪ್ಲ್ಯಾನ್