Webdunia - Bharat's app for daily news and videos

Install App

ಬಿಶ್ರೀರಾಮುಲು ಕಾಂಗ್ರೆಸ್ ಸೇರುವ ಕತೆಯೂ ಹೊಂದಾಣಿಕೆ ರಾಜಕೀಯದ ಭಾಗವೇ

Krishnaveni K
ಗುರುವಾರ, 23 ಜನವರಿ 2025 (16:37 IST)
ಬೆಂಗಳೂರು: ಬಿಜೆಪಿಯಲ್ಲಿ ಎಲ್ಲರೂ ಯತ್ನಾಳ್ ಮತ್ತು ವಿಜಯೇಂದ್ರ ಬಣದ ನಡುವಿನ ತಿಕ್ಕಾಟದ ಬಗ್ಗೆ ಗಮನಹರಿಸುತ್ತಿದ್ದರೆ ಇತ್ತ ಜನಾರ್ಧನ ರೆಡ್ಡಿ ಮತ್ತು ಬಿ ಶ್ರೀರಾಮುಲು ನಡುವೆ ವೈಮನಸ್ಯ ಹಠಾತ್ ಭುಗಿಲೆದ್ದಿದೆ.

ನಿನ್ನೆ ಇದ್ದಕ್ಕಿದ್ದಂತೆ ಬಿಶ್ರೀರಾಮುಲು ಬಿಜೆಪಿ ಸಭೆಯಲ್ಲಿ ಜನಾರ್ಧನ ರೆಡ್ಡಿ ವಿರುದ್ಧ ಆರೋಪ ಹೊರಿಸಿದ್ದು ಎಲ್ಲರನ್ನೂ ಅಚ್ಚರಿಗೆ ದೂಡಿತ್ತು. ಒಂದು ಕಾಲದಲ್ಲಿ ಗಳಸ್ಯ ಕಂಠಸ್ಯ ಎಂಬಂತಿದ್ದ ಇಬ್ಬರ ನಡುವೆ ಅಂತಹದ್ದೇನಾಯಿತು ಎಂದು ಎಲ್ಲರೂ ಅಚ್ಚರಿಪಟ್ಟುಕೊಂಡರು.

ಆದರೆ ಇದೀಗ ಇಬ್ಬರ ನಡುವಿನ ವೈಮನಸ್ಯ ಬೀದಿ ಜಗಳವಾಗಿದೆ. ಇಬ್ಬರೂ ಪತ್ರಿಕಾಗೋಷ್ಠಿ ನಡೆಸಿ ಬಹಿರಂಗವಾಗಿ ಕಿತ್ತಾಡುತ್ತಿದ್ದಾರೆ. ಈ ನಡುವೆ ಬಿ ಶ್ರೀರಾಮುಲು ಕಾಂಗ್ರೆಸ್ ಸೇರುವ ಮಾತುಗಳೂ ಕೇಳಿಬರುತ್ತಿದೆ. ಇತ್ತ ರೆಡ್ಡಿ ಇದೆಲ್ಲಾ ಸತೀಶ್ ಜಾರಕಿಹೊಳಿಯವರನ್ನು ಮಣಿಸಲು ಡಿಕೆಶಿ ಮಾಡಿರುವ ಪ್ಲ್ಯಾನ್ ಎಂದಿದ್ದಾರೆ.

ಡಿಕೆ ಶಿವಕುಮಾರ್ ಗೆ ಮುಖ್ಯಮಂತ್ರಿ ಹುದ್ದೆಗೇರಲು ಇರುವ ಮುಳ್ಳು ಎಂದರೆ ಅದು ಸತೀಶ್ ಜಾರಕಿಹೊಳಿ. ಹೀಗಾಗಿ ಅವರನ್ನು ತಣ್ಣಗೆ ಮಾಡಲು ಶ್ರೀರಾಮುಲು ಅವರನ್ನು ಪಕ್ಷಕ್ಕೆ ಕರೆತರಲು ಡಿಕೆ ಶಿವಕುಮಾರ್ ಅವರೇ ತೆರೆಮರೆಯಲ್ಲಿ ಈ ನಾಟಕ ಮಾಡಿಸುತ್ತಿದ್ದಾರೆ ಎಂದು ಜನಾರ್ಧನ ರೆಡ್ಡಿಯೇ ಬಾಯ್ಬಿಟ್ಟಿದ್ದಾರೆ.

ಇದರ ಬಗ್ಗೆ ಈಗ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದ್ದು, ಈಗ ಶ್ರೀರಾಮುಲು ಕಾಂಗ್ರೆಸ್ ಸೇರ್ಪಡೆ ವದಂತಿಯೂ ಹೊಂದಾಣಿಕೆ ರಾಜಕಾರಣದ ಭಾಗವಾಗಿರಬಹುದೇ ಎಂದು ಅನೇಕರು ಸಂಶಯ ವ್ಯಕ್ತಪಡಿಸುತ್ತಿದ್ದಾರೆ. ಡಿಕೆ ಶಿವಕುಮಾರ್ ಗೆ ಸಹಾಯ ಮಾಡಲೆಂದೇ ಈ ಹಿಂದೆ ಬಿಜೆಪಿಯವರು ಮುಡಾ ಹಗರಣ ನೆಪದಲ್ಲಿ ಸಿದ್ದರಾಮಯ್ಯ ವಿರುದ್ಧ ಪಾದಯಾತ್ರೆ ನಡೆಸಿದ್ದರು ಎಂದು ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಆರೋಪಿಸಿದ್ದರು. ಇದೀಗ ಡಿಕೆಶಿಗೆ ಸಹಾಯ ಮಾಡಲೆಂದೇ ಬಿಜೆಪಿಯ ಕೆಲವು ನಾಯಕರ ಕುಮ್ಮಕ್ಕಿನಿಂದಲೇ ಶ್ರೀರಾಮುಲು ಬಂಡಾಯವೆದ್ದಿದ್ದಾರೆ ಎಂದು ಸಾರ್ವಜನಿಕರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

ಮುಂದಿನ ಸುದ್ದಿ
Show comments