Publish Date: Wed, 07 Nov 2018 (12:06 IST)
Updated Date: Wed, 07 Nov 2018 (12:07 IST)
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಮತ್ತು ಇಡಿ ಇಲಾಖೆ ಅಧಿಕಾರಿಗಳಿಗೆ ಲಂಚ ಕೊಟ್ಟು ಡೀಲ್ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಗಣಿ ದಣಿ ಜನಾರ್ಧನ ರೆಡ್ಡಿ ಬಂಧನಕ್ಕೆ ಸಿಸಿಬಿ ಪೊಲೀಸರು ಹುಡುಕಾಟ ನಡೆಸಿರುವ ಬಗ್ಗೆ ಸ್ನೇಹಿತ, ಶಾಸಕ ಬಿ ಶ್ರೀರಾಮುಲು ಪ್ರತಿಕ್ರಿಯಿಸಿದ್ದಾರೆ.
ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಬಿ ಶ್ರೀರಾಮುಲು ‘ಜನಾರ್ಧನ ರೆಡ್ಡಿ ಎಲ್ಲಿದ್ದಾರೆಂಬ ಮಾಹಿತಿ ನನಗಿಲ್ಲ. ನಾನೂ ಬೆಳಿಗ್ಗೆಯಿಂದ ಚಾನೆಲ್ ಗಳಲ್ಲಿ ಈ ಕುರಿತು ಸುದ್ದಿ ನೋಡುತ್ತಿದ್ದೇನೆ. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಕಾನೂನು ಅದರ ಕೆಲಸ ಮಾಡುತ್ತದೆ’ ಎಂದು ಶ್ರೀರಾಮುಲು ಹೇಳಿಕೆ ನೀಡಿದ್ದಾರೆ.
ರಾಮುಲು ಮತ್ತು ಜನಾರ್ಧನ ರೆಡ್ಡಿ ಆಪ್ತ ಸ್ನೇಹಿತರು ಪರಮಾಪ್ತರು. ಚುನಾವಣೆಯಲ್ಲಿ ಸೋಲಿನ ಬಳಿಕ ಸ್ನೇಹಿತನ ಮೂಲಕ ರಾಮುಲು ಆತಂಕಕ್ಕೊಳಗಾಗಿರುವುದಂತೂ ನಿಜ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.