ವಾಲ್ಮೀಕಿ ನಿಗಮ ಹಗರಣ: ಡಿಸಿ ಕಚೇರಿ ಮುಂಭಾಗ ರಾತ್ರಿಯಿಡೀ ಮಲಗಿದ ಬಿ ಶ್ರೀರಾಮುಲು

Krishnaveni K
ಶನಿವಾರ, 29 ಜೂನ್ 2024 (10:28 IST)
ಬಳ್ಳಾರಿ: ವಾಲ್ಮೀಕಿ ನಿಗಮ ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ತೀವ್ರ ಪ್ರತಿಭಟನೆ ಮುಂದುವರಿಸಿದೆ. ಇದೀಗ ಮಾಜಿ ಸಚಿವ ಬಿ ಶ್ರೀರಾಮುಲು ಡಿಸಿ ಕಚೇರಿ ಮುಂಭಾಗ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ.

ವಾಲ್ಮೀಕಿ ನಿಗಮದಿಂದ ಅಕ್ರಮವಾಗಿ ವರ್ಗಾವಣೆಯಾದ ಹಣದ ಪೈಕಿ ವಿವಿಧ ಖಾತೆಗಳಿಗೆ ವರ್ಗಾವಣೆಯಾದ 10 ಕೋಟಿ ರೂ.ಗಳನ್ನು ತನಿಖಾ ತಂಡ ವಶಪಡಿಸಿಕೊಂಡಿಸಿದೆ. ವಿವಿಧ ಬಾರ್, ಚಿನ್ನದ ಅಂಗಡಿಗಳ ಖಾತೆಗಳಿಗೆ ಹಣ ವರ್ಗಾವಣೆಯಾಗಿರುವುದು ತನಿಖೆ ವೇಳೆ ಪತ್ತೆಯಾಗಿದೆ.

ವಾಲ್ಮೀಕಿ ಹಗರಣ ಈಗ ವಿಪಕ್ಷ ಬಿಜೆಪಿಗೆ ದೊಡ್ಡ ಅಸ್ತ್ರವಾಗಿದೆ. ನಿನ್ನೆಯೂ ರಾಜ್ಯ ಬಿಜೆಪಿ ಘಟಕ ರಾಜ್ಯ ಸರ್ಕಾರದ ವಿರುದ್ಧ ಭಾರೀ ಪ್ರತಿಭಟನೆ ನಡೆಸಿತು. ಇದೇ ವಿಚಾರವಾಗಿ ಬಳ್ಳಾರಿಯಲ್ಲಿ ಮಾಜಿ ಸಚಿವ ಬಿ ಶ್ರೀರಾಮುಲು ಪ್ರತಿಭಟನೆ ನಡೆಸುತ್ತಿದ್ದಾರೆ. ಡಿಸಿ ಕಚೇರಿ ಮುಂಭಾಗ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ.

ಬಿ ಶ್ರೀರಾಮುಲು ವಾಲ್ಮೀಕಿ ಸಮುದಾಯದ ಪ್ರಮುಖ ನಾಯಕ. ಇತ್ತೀಚೆಗೆ ಲೋಕಸಭಾ ಚುನಾವಣೆಯಲ್ಲಿ ಬಳ್ಳಾರಿಯಿಂದ ಸ್ಪರ್ಧಿಸಿ ಸೋತಿದ್ದರು. ಇದೀಗ ತಮ್ಮ ಸಮುದಾಯದ ನಿಗಮದ ಹಗರಣ ವಿಚಾರವನ್ನೇ ಅಸ್ತ್ರವಾಗಿ ಬಳಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲೆಗಳಿಗೆ ದಸರಾ ರಜೆ ಏಕಾಏಕಿ ವಿಸ್ತರಿಸಿದ ಸಿಎಂ ಸಿದ್ದರಾಮಯ್ಯ, ಕಾರಣ ಏನ್ ಗೊತ್ತಾ

ರಾಮನಿಗೆ ಅಗೌರವ ತೋರುವುದು ವಾಲ್ಮೀಕಿಯನ್ನು ಅವಮಾನಿಸಿದ ಹಾಗೇ: ಯೋಗಿ

ರಾಮಾಯಣವನ್ನು ಪಠ್ಯದಲ್ಲಿ ಸೇರಿಸುವ ಬಗ್ಗೆ ಸಿದ್ದರಾಮಯ್ಯ ಮಹತ್ವದ ನಿರ್ಧಾರ

ಸರ್ವೇ ವೇಳೆ ಮೂವರು ಸಿಬ್ಬಂದಿ ಸಾವು: ಕುಟುಂಬಕ್ಕೆ 20ಲಕ್ಷ ಪರಿಹಾರ ಘೋಷಿಸಿದ ಸಿಎಂ

ದೀಪಾವಳಿ ಹಬ್ಬಕ್ಕೆ ದಿನಗಣನೆ: ಪಟಾಕಿ ದುರಂತ ತಡೆಗೆ ಪೊಲೀಸ್ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

ಮುಂದಿನ ಸುದ್ದಿ
Show comments