Webdunia - Bharat's app for daily news and videos

Install App

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ಬಿ ಶ್ರೀರಾಮುಲು

Krishnaveni K
ಬುಧವಾರ, 5 ಫೆಬ್ರವರಿ 2025 (20:14 IST)
ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಬಣ ಬಡಿದಾಟ ಮತ್ತಷ್ಟು ಜೋರಾಗುತ್ತಿದೆ. ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿ ಶ್ರೀರಾಮುಲು ಟವೆಲ್ ಹಾಕಿದ್ದಾರೆ.

ಇತ್ತೀಚೆಗಷ್ಟೇ ಶ್ರೀರಾಮುಲು ರಾಜ್ಯ ಬಿಜೆಪಿ ನಾಯಕತ್ವದ ವಿರುದ್ಧ ಸಿಡಿದೆದ್ದು ಪಕ್ಷ ಬಿಡುವ ಬೆದರಿಕೆ ಹಾಕಿದ್ದರು. ಬಳಿಕ ಹೈಕಮಾಂಡ್ ಮಧ್ಯಪ್ರವೇಶಿಸಿ ಶ್ರೀರಾಮುಲು ಕೋಪ ಶಮನಗೊಳಿಸಿತ್ತು. ಆದರೂ ತಮ್ಮ ಗೆಳೆಯ ಜನಾರ್ಧನ ರೆಡ್ಡಿ ಮೇಲೆ ಶ್ರೀರಾಮುಲು ಮುನಿಸು ಮುಂದುವರಿದಿದೆ.

ಈ ನಡುವೆ ಅವರು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ್ದಾರೆ. ಈಗಾಗಲೇ ಬಸನಗೌಡಪಾಟೀಲ್ ಯತ್ನಾಳ್ ಮತ್ತು ಅವರ ಬಣ ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದೆ. ಅದಕ್ಕೀಗ ಶ್ರೀರಾಮುಲು ಕೂಡಾ ಸೇರ್ಪಡೆಯಾಗಿದ್ದಾರೆ.

ರಾಜ್ಯಾಧ್ಯಕ್ಷ ಪಟ್ಟ ಕೊಟ್ಟರೆ ಬೇಡ ಎನ್ನಲ್ಲ. ನಾನೂ ಕೂಡಾ ಯತ್ನಾಳ್ ಸಮಕಾಲೀನ. ಒಂದು ವೇಳೆ ನನಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ನೀಡಿದರೆ ರಾಜ್ಯದಲ್ಲಿ150 ಸ್ಥಾನಗಳಲ್ಲಿ ಬಿಜೆಪಿ ಗೆಲ್ಲಿಸಿ ಮತ್ತೆ ಪಕ್ಷ ಅಧಿಕಾರಕ್ಕೆ ತರುತ್ತೇನೆ ಎಂದಿದ್ದಾರೆ. ಒಟ್ಟಿನಲ್ಲಿ ಹೈಕಮಾಂಡ್ ಗೆ ಈಗ ಯಾರನ್ನು ಅಧ್ಯಕ್ಷರನ್ನಾಗಿ ಮಾಡುವುದು ಎಂಬುದೇ ದೊಡ್ಡ ತಲೆನೋವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments