Select Your Language

Notifications

webdunia
webdunia
webdunia
webdunia

ಯೋಗೇಶ್ ಗೌಡ ಕೇಸ್ ಸಿಬಿಐ ತನಿಖೆಯ ಹಿಂದಿನ ರಹಸ್ಯ ಬಿಚ್ಚಿಟ್ಟ ಬಿ.ಶ್ರೀರಾಮುಲು

ಯೋಗೇಶ್ ಗೌಡ ಕೇಸ್ ಸಿಬಿಐ ತನಿಖೆಯ ಹಿಂದಿನ ರಹಸ್ಯ ಬಿಚ್ಚಿಟ್ಟ ಬಿ.ಶ್ರೀರಾಮುಲು
ಚಿತ್ರದುರ್ಗ , ಶನಿವಾರ, 7 ಸೆಪ್ಟಂಬರ್ 2019 (16:22 IST)
ಧಾರವಾಡ ಬಿಜೆಪಿ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐ ಗೆ ವಹಿಸಿದ್ದರ ಹಿಂದಿನ ಕಾರಣ ಕುರಿತು ಸಚಿವರು ರಹಸ್ಯ ಬಹಿರಂಗಪಡಿಸಿದ್ದಾರೆ.

ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿಕೆ ನೀಡಿದ್ದು, ಧಾರವಾಡ ಬಿಜೆಪಿ ಜಿಪಂ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣ ಸಿಬಿಐ ತನಿಖೆಗೆ ಆದೇಶ ನೀಡಿದ್ದರ ಹಿಂದ ದ್ವೇಷ ರಾಜಕಾರಣ ಇಲ್ಲ. ಕೊಲೆ ಆದಾಗ ಆಗಿನ ಸಿಎಂ ಜಗದೀಶ್ ಶೆಟ್ಟರ್, ಪ್ರಹ್ಲಾದ್ ಜೋಶಿ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ರು.

ಫೋನ್ ಕದ್ದಾಲಿಕೆ, ಯೋಗೇಶ್ ಗೌಡ ಕೊಲೆ ಪ್ರಕರಣಗಳ ತನಿಖೆಗಳನ್ನು ಮಾತ್ರ ಸಿಬಿಐ ತನಿಖೆಗೆ ನೀಡಿರೋದು.
ಬೇರೆ ಯಾವ ಪ್ರಕರಣವನ್ನೂ ಸಿಬಿಐ ತನಿಖೆಗೆ ನೀಡಿಲ್ಲ ಎಂದ್ರು.

ಅಧಿಕಾರ ಕಳೆದುಕೊಂಡ ಹತಾಶೆಯಿಂದ ಕಾಂಗ್ರೆಸ್-ಜೆಡಿಎಸ್ ನಾಯಕರು ಹೀಗೆ ಮಾತಾಡ್ತಾ ಇದ್ದಾರೆ ಅಂತ ಮೊಳಕಾಲ್ಮೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಸಚಿವ ಬಿ.ಶ್ರೀರಾಮುಲು ಹೇಳಿಕೆ ನೀಡಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಗಡಿ ಜಿಲ್ಲೆಗೆ ಬಂದ ಕೆ.ಎಸ್.ಈಶ್ವರಪ್ಪ ಸಿಡಿಸಿದ್ರು ಹೊಸ ಬಾಂಬ್