Webdunia - Bharat's app for daily news and videos

Install App

ನೀತಿ ಆಯೋಗದ ಸಭೆಗೆ ಬಹಿಷ್ಕಾರ, ಸಿಎಂ ಸಿದ್ದರಾಮಯ್ಯರಿಂದ ರಾಜ್ಯಕ್ಕೆ ಅನ್ಯಾಯ: ಬಿ ವೈ ವಿಜಯೇಂದ್ರ ಆರೋಪ

Krishnaveni K
ಬುಧವಾರ, 24 ಜುಲೈ 2024 (16:16 IST)
ಬೆಂಗಳೂರು: ಗೌರವಾನ್ವಿತ ಮುಖ್ಯಮಂತ್ರಿಗಳು ದೆಹಲಿಯಲ್ಲಿ ನಡೆಯುವ ನೀತಿ ಆಯೋಗದ ಸಭೆಗೆ ಬಹಿಷ್ಕಾರ ಹಾಕಿದ್ದಾರೆ. ನೀತಿ ಆಯೋಗದ ಸಭೆಗೆ ಹಾಜರಾಗುವುದಿಲ್ಲ ಎಂದು ಸ್ವತಃ ಮುಖ್ಯಮಂತ್ರಿಗಳು ಬಹಿಷ್ಕಾರ ಹಾಕುವ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು.

ವಿಧಾನಸಭೆಯಲ್ಲಿ ಸದನದ ಕಲಾಪದಲ್ಲಿ ಇಂದು ಭಾಗವಹಿಸಿ ಮಾತನಾಡಿದ ಅವರು, ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳು. ಅವರು ಆರೂವರೆ ಕೋಟಿ ಕನ್ನಡಿಗರನ್ನು ಪ್ರತಿನಿಧಿಸುವ ಮುಖ್ಯಮಂತ್ರಿಗಳು. ಅವರು ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿಗಳಲ್ಲ ಎಂದು ವಿವರಿಸಿದರು.

ಮುಖ್ಯಮಂತ್ರಿಗಳು ನೀತಿ ಆಯೋಗದ ಸಭೆಗೆ ಬಹಿಷ್ಕಾರ ಹಾಕುವ ಬದಲಾಗಿ ಸಭೆಗೆ ಹಾಜರಾಗಿ ರಾಜ್ಯದ ಹಿತಾಸಕ್ತಿ ಕಾಪಾಡಬೇಕು. ರಾಜ್ಯದ ಮುಖ್ಯಮಂತ್ರಿ ಅವರೆಂಬುದನ್ನು ನೆನಪು ಮಾಡಿಕೊಡಲು ಬಯಸುವುದಾಗಿ ಹೇಳಿದರು.

ನೀತಿ ಆಯೋಗದ ಸಭೆ ವಿಚಾರದಲ್ಲಿ ರಾಜಕಾರಣ ಮಾಡುವುದನ್ನು ಬಿಟ್ಟು, ಸಭೆಯಲ್ಲಿ ಭಾಗವಹಿಸಬೇಕು ಎಂದು ಅವರು ಆಗ್ರಹಿಸಿದರು.
 
 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments