Webdunia - Bharat's app for daily news and videos

Install App

ಚಾಮುಂಡಿ ತಾಯಿಗೆ ಪೂಜೆ ಸಲ್ಲಿಸಿ ಪಾದಯಾತ್ರೆ ಶುರು ಮಾಡಿದ ಬಿ ವೈ ವಿಜಯೇಂದ್ರ

Krishnaveni K
ಶನಿವಾರ, 3 ಆಗಸ್ಟ್ 2024 (09:56 IST)
ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮುಡಾ ಹಗರಣದ ವಿರುದ್ಧ ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಂಡಿರುವ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಇಂದಿನಿಂದ ಪಾದಯಾತ್ರೆ ಆರಂಭಿಸಿದ್ದಾರೆ.

ಇಂದು ಬೆಳಿಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಪತ್ನಿ ಸಮೇತರಾಗಿ ನಾಡದೇವತೆ ಮೈಸೂರಿನ ಚಾಮುಂಡಿ ತಾಯಿಯ ದರ್ಶನ ಪಡೆದು ಪೂಜೆ ಸಲ್ಲಿಸಿ ಪಾದಯಾತ್ರೆಗೆ ಚಾಲನೆ ನೀಡಿದ್ದಾರೆ. ಈ ಪಾದಯಾತ್ರೆಯ ಯಶಸ್ಸಿಗಾಗಿ ಚಾಮುಂಡಿ ತಾಯಿಗೆ ವಿಜಯೇಂದ್ರ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ಮುಡಾ ಹಗರಣ, ವಾಲ್ಮೀಕಿ ಹಗರಣ ಮತ್ತು ಎಸ್ಸಿ, ಎಸ್ಟಿ ಸಮುದಾಯದವರಿಗೆ ಮೀಸಲಿದ್ದ ಹಣ ದುರ್ಬಳಕೆ ವಿರುದ್ಧ ಬಿಜೆಪಿ ನೇತೃತ್ವದಲ್ಲಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಮೊದಲು ಈ ಪಾದಯಾತ್ರೆಯಲ್ಲಿ ಭಾಗಿಯಾಗಲು ಮಿತ್ರ ಪಕ್ಷ ಜೆಡಿಎಸ್ ಹಿಂದೇಟು ಹಾಕಿತ್ತು. ಕುಮಾರಸ್ವಾಮಿ ಬಹಿರಂಗವಾಗಿಯೇ ಬಿಜೆಪಿ ವಿರುದ್ಧ ಕಿಡಿ ಕಾರಿದ್ದರು.

ಆದರೆ ಸಂಧಾನದ ಬಳಿಕ ಕುಮಾರಸ್ವಾಮಿ ಮುನಿಸು ತಣ್ಣಗಾಗಿದ್ದು, ಇದೀಗ ಜೆಡಿಎಸ್ ನಾಯಕರೂ ಪಾದಯಾತ್ರೆಯಲ್ಲಿ ಭಾಗಿಯಾಗುತ್ತಿದ್ದಾರೆ. ಇಂದು ಕೆಂಗೇರಿಯ ಕೆಂಪಮ್ಮ ದೇಗುಲದಿಂದ ಆರಂಭವಾಗುವ ಪಾದಯಾತ್ರೆ ಆಗಸ್ಟ್ 10 ರಂದು ಮುಕ್ತಾಯವಾಗಲಿದೆ. ಪ್ರತಿನಿತ್ಯ 20 ಕಿ.ಮೀ. ನಡಿಗೆ ಮಾಡಲಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments