Select Your Language

Notifications

webdunia
webdunia
webdunia
webdunia

ಪಾದಯಾತ್ರೆಗೆ ನಿರೀಕ್ಷೆಗೂ ಮೀರಿ ಬೆಂಬಲ: ವಿಜಯೇಂದ್ರ

BY Vijayendra

Krishnaveni K

ಬೆಂಗಳೂರು , ಶನಿವಾರ, 3 ಆಗಸ್ಟ್ 2024 (11:34 IST)
ಬೆಂಗಳೂರು: ಪಾದಯಾತ್ರೆಗೆ ನಮ್ಮ ನಿರೀಕ್ಷೆಗೂ ಮೀರಿ ಜನರು ಬರುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಸಂತಸ ವ್ಯಕ್ತಪಡಿಸಿದರು.

ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಪಾದಯಾತ್ರೆ ಯಶಸ್ವಿಯಾಗಬೇಕು. ಈ ಭ್ರಷ್ಟ- ಹಗರಣಗಳ ಕಾಂಗ್ರೆಸ್ ಸರಕಾರದ ವಿರುದ್ಧ ಹೋರಾಟದ ಯಶಸ್ಸಿಗಾಗಿ ನಮ್ಮೆಲ್ಲ ಕಾರ್ಯಕರ್ತರು ಅತ್ಯುತ್ತಮ ವ್ಯವಸ್ಥೆ ಮಾಡಿದ್ದಾರೆ ಎಂದ ಅವರು, ಸಾಕಷ್ಟು ಉತ್ಸಾಹವೂ ಪಕ್ಷದಲ್ಲಿದೆ ಎಂದು ವಿವರಿಸಿದರು.

ನಾಡದೇವತೆಗೆ ನಮಿಸಿ..: ಮೈಸೂರು ಚಲೋ ಪಾದಯಾತ್ರೆಯ ಆರಂಭಕ್ಕೂ ಮುನ್ನ ಇಂದು ಬಿ.ವೈ.ವಿಜಯೇಂದ್ರ ಅವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ, ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನಾಶೀರ್ವಾದ ಪಡೆದರು. ಅಲ್ಲದೆ, ಪಾದಯಾತ್ರೆಯ ಯಶಸ್ಸಿಗೆ ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ಎಂ.ರಾಜೇಂದ್ರ, ಒಬಿಸಿ ಮೋರ್ಚಾ ರಾಜ್ಯಾಧ್ಯಕ್ಷ ಆರ್.ರಘು ಕೌಟಿಲ್ಯ, ಜಿಲ್ಲಾಧ್ಯಕ್ಷರಾದ ಎಲ್. ನಾಗೇಂದ್ರ, ಎಲ್.ಆರ್.ಮಹದೇವಸ್ವಾಮಿ, ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಕೇರಳಕ್ಕಿಂತಲೂ ಕರ್ನಾಟಕಕ್ಕೇ ಭೂಕುಸಿತದ ಅಪಾಯ ಹೆಚ್ಚು: ಹೀಗೇ ಆದರೆ ಅನಾಹುತ ಗ್ಯಾರಂಟಿ