Select Your Language

Notifications

webdunia
webdunia
webdunia
webdunia

ವಿಜಯಪುರ ಕೋರ್ಟ್ ಆವರಣದಲ್ಲೇ ಬಾಗಪ್ಪ ಹರಿಜನ್ ಮೇಲೆ ಗುಂಡಿನ ದಾಳಿ

ವಿಜಯಪುರ ಕೋರ್ಟ್ ಆವರಣದಲ್ಲೇ ಬಾಗಪ್ಪ ಹರಿಜನ್ ಮೇಲೆ ಗುಂಡಿನ ದಾಳಿ
ವಿಜಯಪುರ , ಮಂಗಳವಾರ, 8 ಆಗಸ್ಟ್ 2017 (12:08 IST)
ಭೀಮಾ ತೀರದಲ್ಲಿ ಮತ್ತೆ ಗುಂಡಿನ ಮೊರೆತ ಕೇಳಿಬಂದಿದೆ. 2013ರ ಕೊಲೆ ಪ್ರಕರಣವೊಂದರ ಆರೋಪಿ ಬಾಗಪ್ಪ ಹರಿಜನ ಮೇಲೆ ಗುಂಡಿನ ದಾಳಿ ನಡೆದಿದೆ. ವಿಜಯಪುರದ ಜಿಲ್ಲಾ ಕೋರ್ಟ್ ಆವರಣದಲ್ಲಿ ಬಾಗಪ್ಪ ಹರಿಜನ ಮೇಲೆ ಗುಂಡಿನ ದಾಳಿ ನಡೆದಿದೆ.

ಪ್ರಕರಣದ ವಿಚಾರಣೆಗೆಂದು ಬಾಗಪ್ಪ ಹರಿಜನ ಕಾರು ಇಳಿದು ಬರುತ್ತಿದ್ದಂತೆ ಬೈಕ್`ನಲ್ಲಿ ಬಂದ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾನೆ. ನಾಡ ಬಂದೂಕಿನಿಂದ 5 ಸುತ್ತು ಗುಂಡು ಹಾರಿಸಲಾಗಿದ್ದು, ಬಾಗಪ್ಪ ಹರಿಜನಗೆ ಗಾಯಗಳಾಗಿವೆ. ಕೂಡಲೇ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಗ ಎಮದು ತಿಳಿದು ಬಮದಿದೆ.ಪ್ಪ ಹರಿಜನ ದೇಹಕ್ಕೆ 3 ಗುಂಡು ಹೊಕ್ಕಿದ್ದು, ಾತನ ಸ್ಥಿತಿ ಗಂಭೀರವಾಗಿದೆ.

ಸ್ಥಳಕ್ಕೆ ಜಲನಗರ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಪರಿಸ್ಥಿತಿ ಉದ್ವಿಗ್ನವಾಗಿದೆ. ಗುಂಡಿನ ದಾಳಿ ಬಳಿಕ ಸ್ಥಳದಲ್ಲಿದ್ದ ಜನ ದಿಕ್ಕಾಪಾಲಾಗಿ ಓಡಿದ್ದಾರೆ. ಘಟನೆ ಬಳಿಕ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯಸಭೆ ಚುನಾವಣೆ: ಕಾಂಗ್ರೆಸ್ ಗೇ ಕೈ ಕೊಟ್ಟರಾ ಶಾಸಕರು?