Webdunia - Bharat's app for daily news and videos

Install App

ಬಾಗಪ್ಪ ಹತ್ಯೆ ಯತ್ನ: ಪ್ರಮುಖ ಆರೋಪಿ ಪೀರೇಶ್ ಬಂಧನ

Webdunia
ಗುರುವಾರ, 17 ಆಗಸ್ಟ್ 2017 (13:03 IST)
ಭೀಮಾ ತೀರದ ಕುಖ್ಯಾತಿಯ ಬಾಗಪ್ಪ ಹರಿಜನ ಮೇಲಿನ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಪೀರೇಶ ಹಡಪದನನ್ನ ಪೊಲೀಸರು ಬಂಧಿಸಿದ್ದಾರೆ.

ಇಂಡಿ ಹೊರವಲಯದ ಡಾಬಾದಲ್ಲಿ ಕಂಠಪೂರ್ತಿ ಕುಡಿದು ತೂರಾಡುತ್ತಿದ್ದ ಪೀರೇಶನನ್ನ ಪೊಲೀಸರು ಬಂಧಿಸಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ವಿಜಯಪುರಕ್ಕೆ ಶಿಫ್ಟ್ ಮಾಡಲಾಗಿದೆ. ಬಂಧಿತನಿಂದ ಕೆಲ ಶಸ್ತ್ರಾಸ್ತ್ರಗಳನ್ನೂ ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಬಾಗಪ್ಪ ಹರಿಜನ ಹತ್ಯೆಗೆ 25 ಲಕ್ಷ ರೂ. ಸುಪಾರಿ ಪಡೆದಿದ್ದ ಈತ ಇತರೆ 6 ಮಂದಿ ಜೊತೆ ಸೇರಿ ಸಂಚು ರೂಪಿಸಿದ್ದ ಎಂದು ತಿಳಿದುಬಂದಿದೆ.

 ಆಗಸ್ಟ್ 15ರಂದು ಪ್ರಕರಣದ ಇನ್ನಿತರೆ ಆರೋಪಿಗಳಾದ 6 ಮಂದಿಯನ್ನ ಪೊಲೀಸರು ಬಂಧಿಸಿದ್ದರು. ರಮೇಶ್ ಹಡಪದ, ಭೀಮಶ್ಯಾ ಹರಿಜನ, ನಾಮದೇವ ಹೊಡ್ಡಮನಿ, ರಜಾಕ್ ಕಾಂಬ್ಳೆ, ಪ್ರಭು ಜಮಾದಾರ, ಮಲ್ಲೇಶ ಬಿಂಜಗೇರಿಯನ್ನ ಬಂಧಿಸಲಾಗಿತ್ತು.

ಆಗಸ್ಟ್ 8ರಂದು ವಿಜಯಪುರ ಕೋರ್ಟ್`ಗೆ ಕೊಲೆ ಪ್ರಕರಣವೊಂದರ ವಿಚಾರಣೆಗೆ ಆಗಮಿಸಿದ್ದ ಬಾಗಪ್ಪ ಹರಿಜನ ಮೇಲೆ 5 ಸುತ್ತು ಗುಂಡು ಹಾರಿಸಲಾಗಿತ್ತು. ತೀವ್ರವವಾಗಿ ಗಾಯಗೊಂಡಿದ್ದ ಬಾಗಪ್ಪನನ್ನ ಹೆಚ್ಚಿನ ಚಿಕಿತ್ಸೆಗೆ ಹೈದ್ರಾಬಾದ್`ಗೆ ರವಾನಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments