ಬಾಬಾ ಸಾಹೇಬರ ಸಂವಿಧಾನ ಓದಿದ ಬಾಲೆ

geetha
ಬುಧವಾರ, 31 ಜನವರಿ 2024 (18:00 IST)
ಬೆಂಗಳೂರು :ಸಚಿವ ಪ್ರಿಯಾಂಕ್‌ ಖರ್ಗೆ ಈ ಬಾಲೆಯ ವಿಡಿಯೋವನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದು, ಬಾಲಕಿಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಚಿತ್ತಾಪುರಿನ ಹಳಕಟ್ಟಾ ಗ್ರಾಮ ಪಂಚಾಯ್ತಿಯಲ್ಲಿ ನಡೆದ ಸಂವಿಧಾನ ಜಾಗೃತಿ ಜಾಥಾದಲ್ಲಿ ಒಂದನೇ ತರಗತಿಯ ಪುಟ್ಟ ಬಾಲೆ ಸಂವಿಧಾನ ಪ್ರಸ್ತಾವನೆಯನ್ನು ನಿರರ್ಗಳವಾಗಿ ಹೇಳಿದ್ದಾಳೆ.  ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಶಾಲಾಕಾಲೇಜುಗಳಲ್ಲಿ ಸಂವಿಧಾನ ಓದು ಎಂಬ ಹೊಸ ಕ್ರಮವನ್ನು ಜಾರಿಗೊಳಿಸಿದೆ. ವಿದ್ಯಾರ್ಥಿಗಳಿಗೆ ಸಂವಿಧಾನದ ಬಗ್ಗೆ ಅರಿವು ಮತ್ತು ಗೌರವ ಮೂಡಿಸುವ ಸಲುವಾಗಿ ಪ್ರಾರಂಭಿಸಿರುವ ಈ ಕಾರ್ಯಕ್ರಮದಲ್ಲಿ ಆರು ವರ್ಷದ ಬಾಲೆಯೊಬ್ಬಳು ಸ್ಪಷ್ಟವಾಗಿ ಸಂವಿಧಾನದ ಪ್ರಸ್ತಾವನೆಯನ್ನು ಕಂಠಪಾಠದ ಮೂಲಕ ಓದಿ ಜನರ ಮೆಚ್ಚುಗೆ ಗಳಿಸಿದ್ದಾಳೆ. 

ಚಿತ್ತಾಪುರಿನ ಹಳಕಟ್ಟಾ ಗ್ರಾಮ ಪಂಚಾಯ್ತಿಯಲ್ಲಿ ನಡೆದ ಸಂವಿಧಾನ ಜಾಗೃತಿ ಜಾಥಾದಲ್ಲಿ ಒಂದನೇ ತರಗತಿಯ ಪುಟ್ಟ ಬಾಲೆ ಸಂವಿಧಾನ ಪ್ರಸ್ತಾವನೆಯನ್ನು ನಿರರ್ಗಳವಾಗಿ ಹೇಳಿದ್ದಾಳೆ. ನನ್ನ ಬಯಕೆಯ ಸಮ ಸಮಾಜದ ಪ್ರಬುದ್ಧ ಚಿತ್ತಾಪುರದ ಸಾಕಾರವನ್ನು ಈ ಮಗುವಿನಲ್ಲಿ ಕಾಣುತ್ತಿದ್ದೇನೆ ಎಂದು ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ಜೊತೆಗೆ, ಈ ಮಗುವನ್ನು ದಿಕ್ಸೂಚಿಯಾಗಿಟ್ಟುಕೊಂಡು ಗುರುಬಸವಣ್ಣನವರ ಹಾಗೂ ಸಂವಿಧಾನದ ಆಶಯಗಳನ್ನು ಪಾಲಿಸಲು ಪ್ರಮಾಣ ಮಾಡೋಣ ಪ್ರಿಯಾಂಕ್‌ ಖರ್ಗೆ ಕರೆ ನೀಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನರೇಗಾ ವಿಚಾರದಲ್ಲಿ ಚರ್ಚೆಗೆ ಆಹ್ವಾನಿಸಿದ ಎಚ್‌ಡಿಕೆಗೆ ಶಿವಕುಮಾರ್ ತಿರುಗೇಟು

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕರ ವಿಚಾರ: ಸ್ಪಷ್ಟನೆ ಕೊಟ್ಟ ಸಿದ್ದರಾಮಯ್ಯ

ಬಾಂಗ್ಲಾದೇಶ: ಶರಿಯತ್‌ಪುರ ಬಾಂಬ್ ಸ್ಫೋಟದಲ್ಲಿ ಸಾವಿನ ಸಂಖ್ಯೆ 2ಕ್ಕೆ ಏರಿಕೆ

ಜಮೀನಿನಲ್ಲಿ ಸಿಕ್ಕ ನಿಧಿ ಸರ್ಕಾರಕ್ಕೆ ನೀಡಿ ಪ್ರಾಮಾಣಿಕತೆ ಮೆರೆದು ಬೀದಿಗೆ ಬಿದ್ದ ಕುಟುಂಬ: ಯಾಕೆ ಹೀಗಾಯ್ತು

ಮುಟ್ಟಿನ ಕಾಲದ ನೋವು ತಾಳಲಾರದೆ ನೇಣಿಗೆ ಶರಣಾದ ಯುವತಿ

ಮುಂದಿನ ಸುದ್ದಿ
Show comments