ಬಾಬುಸಾಬ್ ಪಾಳ್ಯ ಕಟ್ಟಡ ಕುಸಿತ ಸಂತ್ರಸ್ತರಿಗೆ ಪ್ರಧಾನಿ ಮೋದಿಯಿಂದ ಪರಿಹಾರ

Krishnaveni K
ಗುರುವಾರ, 24 ಅಕ್ಟೋಬರ್ 2024 (09:22 IST)
ಬೆಂಗಳೂರು: ಬಾಬುಸಾಬ್ ಪಾಳ್ಯದ ಬಹುಮಹಡಿ ಕಟ್ಟಡ ಕುಸಿತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದು ಪರಿಹಾರ ಘೋಷಣೆ ಮಾಡಿದ್ದಾರೆ.

ಕಟ್ಟಡ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 8 ಕ್ಕೆ ಏರಿಕೆಯಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ಕಾರ್ಯಾಲಯ ಸಂತಾಪ ವ್ಯಕ್ತಪಡಿಸಿದ್ದು, ಜೊತೆಗೆ ಮೃತರ ಕುಟುಂಬಕ್ಕೆ ಪರಿಹಾರವಾಗಿ 2 ಲಕ್ಷ ರೂ.ಗಳನ್ನು ಘೋಷಣೆ ಮಾಡಿದೆ.

ಮೃತರ ಕುಟುಂಬಕ್ಕೆ 2 ಲಕ್ಷ ರೂ., ಗಾಯಗೊಂಡವರ ಕುಟುಂಬಕ್ಕೆ 50,000 ರೂ. ಪರಿಹಾರ ಘೋಷಣೆಯಾಗಲಿದೆ. ಮೃತಪಟ್ಟವರ ಕುಟುಂಬಕ್ಕೆ ನನ್ನ ಸಂತಾಪಗಳು. ಅವರ ದುಃಖದಲ್ಲಿ ನಾನೂ ಭಾಗಿ ಎಂದು ಮೋದಿ ಟ್ವೀಟ್ ಮಾಡಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಬಾಬುಸಾಬ್ ಪಾಳ್ಯದಲ್ಲಿ ಕಟ್ಟಡ ಕುಸಿತಕ್ಕೆ ಅಕ್ರಮವಾಗಿ ಮತ್ತು ಕಳಪೆ ಸಾಮಗ್ರಿಗಳನ್ನು ಬಳಸಿ ಬಹು ಮಹಡಿ ಕಟ್ಟಿದ್ದೇ ಕಾರಣ ಎಂದು ತಿಳಿದುಬಂದಿದೆ. ಕಾರ್ಯಾಚರಣೆ ಇಂದೂ ಮುಂದುವರಿದಿದೆ. ಇಂದು ಸಿಎಂ ಸಿದ್ದರಾಮಯ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಬಿಹಾರ, ಆಂಧ್ರ, ತಮಿಳುನಾಡು ಮೂಲದವರು ಸಾವನ್ನಪ್ಪಿದ್ದವರು. 14 ಮಂದಿಯನ್ನು ಸುರಕ್ಷಿತವಾಗಿ ಹೊರ ಕರೆತರಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments