ಮಗುವಿನ ಕೈ ಸುಟ್ಟ ಮಲತಾಯಿ!?

Webdunia
ಮಂಗಳವಾರ, 7 ಜೂನ್ 2022 (08:37 IST)
ಕಲಬುರಗಿ : ಊಟ ಕೇಳಿದ 4 ವರ್ಷದ ಮುಗ್ಧ ಮಗುವಿನ ಕೈಯನ್ನು ಕೆಂಡದ ಕಿಡಿಯಿಂದ ಮಲತಾಯಿ ಮನಬಂದಂತೆ ಸುಟ್ಟಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ನಾಲವಾರ ತಾಂಡಾ ಗ್ರಾಮದಲ್ಲಿ ನಡೆದಿದೆ.
 
ತಾಲೂಕಿನ ನಾಲವಾರ ತಾಂಡಾದ ತಿಪ್ಪಣ್ಣ ಎಂಬುವರು ಪತ್ನಿ ಮರಣ ನಂತರ ಪುತ್ರಿ ಸೋನಾಲಿಕಾಗೆ ಅಮ್ಮನ ಪ್ರೀತಿ ಸಿಗಬೇಕೆಂದು ಮರೆಮ್ಮಳನ್ನು 2ನೇ ಮದುವೆ ಆಗಿದ್ದರು. ಆದರೆ, ಕೆಲಸದ ನಿಮಿತ್ತ ತಿಪ್ಪಣ್ಣ ಪೂನಾಗೆ ಹೋಗಿದ್ದು, ಇತ್ತ ಸೋನಾಲಿಕಾಗೆ ಮರೆಮ್ಮ ಮನಬಂದಂತೆ ಹಿಂಸಿಸುತ್ತಿದ್ದಾಳೆ. 

ನಾಲ್ಕು ವರ್ಷ ಸೋನಲಿಕ ಮಲತಾಯಿಗೆ ಊಟ ಕೇಳಿದರೆ ಹೊಡೆಯುವುದು, ಬಡಿಯುವುದು, ಮಂಚಕ್ಕೆ ಕಟ್ಟಿ ಹಾಕುವುದು, ಮೈ ಕೈ ಸುಡುವುದು ಮಾಡಿದ್ದಾಳೆ. ದಿನನಿತ್ಯ ಹೀಗೆ ಕಿರುಕುಳ ನೀಡುತ್ತಿದ್ದನ್ನು ನೋಡುತ್ತಿದ್ದ ಜನ ಕಳೆದ 3-4 ದಿನಗಳಿಂದ ಆಟವಾಡಲು ಮಗು ಹೊರಗೆ ಬರದೇ ಇರುವುದರಿಂದ ಸಂಶಯಗೊಂಡು ಮನೆಗೆ ಹೋಗಿದ್ದಾರೆ. 

ಈ ವೇಳೆ ಮಂಚಕ್ಕೆ ಮಗುವನ್ನು ಕಟ್ಟಿ ಹಾಕಿರುವುದನ್ನು ಗಮನಿಸಿ ನಂತರ ಕಟ್ಟಿದ್ದ ಹಗ್ಗವನ್ನು ಬಿಚ್ಚಿ ಮಗುವನ್ನು ಎತ್ತಿಕೊಂಡು ಹೊರಗೆ ಬಂದಾಗ ಮಗುವಿನ ಎರಡು ಕೈಗಳನ್ನು ಕೆಂಡದ ಕಿಡಿಯಿಂದ ಸುಟ್ಟಿರುವುದು ಬೆಳಕಿಗೆ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಗಾಳಿ ಸಹಿತ ಭಾರೀ ಮಳೆ

ಸಮೋಸಗಾಗಿ ರೈಲು ನಿಲ್ಲಿಸಲಿಲ್ಲ: ರೈಲ್ವೇ ಇಲಾಖೆಯಿಂದ ಸ್ಪಷ್ಟನೆ

ಬೆಂಗಳೂರಿನ ಆಚೆಗೆ ಮತ್ತಷ್ಟು ಬೆಂಗಳೂರುಗಳನ್ನು ನಿರ್ಮಿಸಲು ನಮ್ಮ ಸರ್ಕಾರ ಮುಂದಾಗಿದೆ

ನಿರಂಜನ್ ಇನ್ನಿಲ್ಲ ಎಂಬ ಸುದ್ದಿ ನನ್ನ ಹೃದಯವನ್ನು ಆಳವಾಗಿ ಅಲುಗಾಡಿಸಿದೆ

ವೈದ್ಯರ ಮೇಲಿನ ಹಲ್ಲೆ ಪ್ರಕರಣ, ಶಿವಸೇನಾ ಸೇನಾ ಕಾರ್ಪೋರೇಟರ್‌ ಮಹೇಶ್ ಮ್ಹಾತ್ರೆ ಅರೆಸ್ಟ್

ಮುಂದಿನ ಸುದ್ದಿ
Show comments