Webdunia - Bharat's app for daily news and videos

Install App

ಅರಮನೆಯಲ್ಲಿಂದು ಮಹಾರಾಣಿ ತ್ರಿಷಿಕಾ ದೇವಿಯವರ ಸೀಮಂತ ಶಾಸ್ತ್ರ

Webdunia
ಭಾನುವಾರ, 1 ಅಕ್ಟೋಬರ್ 2017 (10:33 IST)
ಮೈಸೂರು: ಅದ್ಧೂರಿ ದಸರಾ ಸಂಭ್ರಮಕ್ಕೆ ನಿನ್ನೆ ತೆರೆ ಬಿದ್ದಿದೆ. ಆದರೆ ಅರಮನೆಯಲ್ಲಿ ಮತ್ತಷ್ಟು ಸಂಭ್ರಮ ಹೆಚ್ಚಾಗಿದೆ. ಇದಕ್ಕೆ ಕಾರಣ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರ ಧರ್ಮಪತ್ನಿ ತ್ರಿಷಿಕಾ ದೇವಿ ಒಡೆಯರ್ ಗರ್ಭವರಿಯಾಗಿರುವುದು. ಏಳು ತುಂಬಿದ ಹಿನ್ನೆಲೆಯಲ್ಲಿ ಇಂದು ಅರಮನೆಯಲ್ಲಿ ಸೀಮಂತ ಶಾಸ್ತ್ರ ನಡೆಯಲಿದೆ.

ಸೀಮಂತ ಕಾರ್ಯಕ್ಕೆ ಈಗಾಗಲೇ ಅರಮನೆಯಲ್ಲಿ ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಅರಮನೆಯ ಧಾರ್ಮಿಕ ಸಂಪ್ರದಾಯದಂತೆ ಕಾರ್ಯಕ್ರಮ ನಡೆಯಲಿದೆ. ಈಗಾಗಲೇ ತ್ರಿಷಿಕಾ ದೇವಿಯವರ ತಂದೆ ಹರ್ಷವರ್ಧನ್ ಸಿಂಗ್, ತಾಯಿ ಮಹೇಶ್ವರಿ ಸಿಂಗ್ ಸೇರಿದಂತೆ ಸಂಬಂಧಿಕರು ಅರಮನೆ ತಲುಪಿದ್ದಾರೆ.

ಈ ಕಾರ್ಯಕ್ರಮಕ್ಕೆ ರಾಜವಂಶಸ್ಥರಿಗೆ ಮಾತ್ರ ಆಹ್ವಾನ ನೀಡಲಾಗಿದ್ದು, ಮಾಧ್ಯಮ ಸೇರಿದಂತೆ ಇತರರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಅಂದಹಾಗೆ ಇಷ್ಟು ದಿನ ಬೆಂಗಳೂರಿನಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ತ್ರಿಷಿಕಾ ಅವರು ದಸರಾ ಹಿನ್ನೆಲೆಯಲ್ಲಿ ಶತಾಬ್ದಿ ರೈಲಿನಲ್ಲಿ ಮೈಸೂರಿಗೆ ಆಗಮಿಸಿದ್ದರು. ಈ ಮೂಲಕ ಗರ್ಭವತಿಯಾಗಿ ದಸರಾದಲ್ಲಿ ಪಾಲ್ಗೊಂಡ ಯದುವಂಶದ ಮೂರನೇ ಮಹಾರಾಣಿ ಎಂಬ ಹೆಗ್ಗಳಿಕೆ ಪಾತ್ರವಾಗಿದ್ದಾರೆ.

56 ವರ್ಷದ ಬಳಿಕ ಗರ್ಭವತಿಯಾಗಿ ಮಹಾರಾಣಿ ತ್ರಿಷಿಕಾ ದೇವಿ ದಸರಾದಲ್ಲಿ ಪಾಲ್ಗೊಂಡಿದ್ದರು. ಈ ಹಿಂದೆ 1961ರಲ್ಲಿ ಮಹಾರಾಣಿ ತ್ರಿಪುರ ಸುಂದರಿ ಅಮ್ಮಣ್ಣಿ ಗರ್ಭವತಿಯಾಗಿದ್ದ ಸಂದರ್ಭದಲ್ಲಿ ದಸರಾದಲ್ಲಿ ಪಾಲ್ಗೊಂಡಿದ್ರು. ಇದಕ್ಕೂ ಮೊದಲು 1890ರಲ್ಲಿ ವಾಣಿ ವಿಲಾಸ ಅಮ್ಮಣ್ಣಿಯವರು ಗರ್ಭಧರಿಸಿದ್ದಾಗ ದಸರಾದಲ್ಲಿ ಪಾಲ್ಗೊಂಡಿದ್ದರು ಎಂದು ಇತಿಹಾಸ ಹೇಳುತ್ತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments