Webdunia - Bharat's app for daily news and videos

Install App

ಮಗುವನ್ನು ದಡದಲ್ಲಿ ನಿಲ್ಲಿಸಿ : ಕಾಲುವೆಗೆ ಹಾರಿದ ತಾಯಿ!

Webdunia
ಶನಿವಾರ, 22 ಜನವರಿ 2022 (13:49 IST)
ಬಳ್ಳಾರಿ : ಮೂರು ವರ್ಷದ ಮಗುವನ್ನು ದಡದ ಮೇಲೆ ನಿಲ್ಲಿಸಿ ತಾಯಿ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ತಿಮ್ಮಲಾಪುರ ಗ್ರಾಮದಲ್ಲಿ ನಡೆದಿದೆ.

ಮೃತ ದುರ್ದೈವಿಯನ್ನು ಸರಸ್ವತಿ(38) ಎಂದು ಗುರುತಿಸಲಾಗಿದ್ದು, ಮಗುವಿಗೆ ತಾಯಿ ಎಲ್ಲಿ ಎಂದು ಕೇಳಿದರೆ ಕಾಲುವೆ ಕಡೆಗೆ ತೋರಿಸುವ ದೃಶ್ಯ ಮನಕಲಕುವಂತಿದೆ. ಸದ್ಯ ಮಗುವಿನ ಹೇಳಿಕೆ ಆಧರಿಸಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. 

ಸರಸ್ವತಿಯನ್ನು ಕಳೆದ ಹದಿನೆಂಟು ವರ್ಷದ ಹಿಂದೆ ಆಂಧ್ರದ ಬೊಮ್ಮನಾಳ್ ಗ್ರಾಮಕ್ಕೆ ಕೊಟ್ಟು ಮದುವೆ ಮಾಡಲಾಗಿತ್ತು. ಮೂವರು ಮಕ್ಕಳಿರುವ ಸರಸ್ವತಿಯ ಆರೋಗ್ಯ ಕೆಲ ದಿನಗಳ ಹಿಂದೆ ಹದಗೆಟ್ಟಿರುವ ಹಿನ್ನೆಲೆ ತಮ್ಮ ತವರು ಮನೆಯಲ್ಲಿ ವಾಸವಾಗಿದ್ದರು.

ಇದೀಗ ಮಹಿಳೆ ಕಾಣೆಯಾಗಿರುವುದರಿಂದ ಅವರ ತಂದೆ ಮಾರೆಪ್ಪ ಅವರು ಕುಡತಿನಿ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಪ್ರಕರಣ ದಾಖಲಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments