Webdunia - Bharat's app for daily news and videos

Install App

ಶಾಸನ ಮುನಿರತ್ನಗೂ ರಾಕ್ ಲೈನ್ ವೆಂಕಟೇಶ್, ದರ್ಶನ್ ಗೂ ಇದೆ ಪರಮಾಪ್ತತೆ: ಇವರ ಹಿನ್ನಲೆಯೇನು

Krishnaveni K
ಸೋಮವಾರ, 16 ಸೆಪ್ಟಂಬರ್ 2024 (09:17 IST)
ಬೆಂಗಳೂರು: ಗುತ್ತಿಗೆದಾರನಿಗೆ ಬೆದರಿಕೆ, ಜಾತಿ ನಿಂದನೆ ಆರೋಪದಲ್ಲಿ ಬಂಧಿತರಾಗಿರುವ ಎಂಎಲ್ಎ ಮುನಿರತ್ನ ನಿಜಕ್ಕೂ ಯಾರು ಇವರ ಹಿನ್ನಲೆಯೇನು ಎಂಬ ವಿವರ ಇಲ್ಲಿದೆ ನೋಡಿ.

ಮುನಿರತ್ನ ಈ ಮೊದಲು ಕಾಂಗ್ರೆಸ್ ಶಾಸಕರಾಗಿದ್ದವರು ಬಳಿಕ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿಕೊಂಡಿದ್ದರು. ಇದೀಗ ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿ 20 ಲಕ್ಷ ರೂ. ಹಣಕ್ಕೆ ಬೇಡಿಕೆಯಿಟ್ಟ ಆರೋಪದಲ್ಲಿ ಶಾಸಕ ಮುನಿರತ್ನರನ್ನು ಪೊಲೀಸರು ಬಂಧಿಸಿದ್ದಾರೆ. ತಮ್ಮ ವಿರುದ್ಧ ಎಫ್ಐಅರ್ ದಾಖಲಾಗುತ್ತಿದ್ದಂತೇ ಆಂಧ್ರಕ್ಕೆ ಪರಾರಿಯಾಗಲು ಯತ್ನಿಸಿದ ಮುನಿರತ್ನರನ್ನು ಆಂಧ್ರಗಡಿಯಲ್ಲೇ ಬಂಧಿಸಲಾಗಿತ್ತು.

ಮುನಿರತ್ನ ಮೂಲತಃ ಚಿತ್ರ ನಿರ್ಮಾಪಕರು. ಹೀಗಾಗಿ ಕನ್ನಡ ಚಿತ್ರರಂಗದ ಅನೇಕ ಗಣ್ಯರೊಂದಿಗೆ ಅವರಿಗೆ ನಿಕಟ ಸಂಪರ್ಕವಿದೆ. ಅದರಲ್ಲೂ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರ ಸಂಬಂಧಿ. ಇದೀಗ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ರ ಕುರಕ್ಷೇತ್ರ ಸಿನಿಮಾವನ್ನು ನಿರ್ಮಿಸಿದ್ದರು. ಅವರ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದವರು.

ಇದೇ ಮುನಿರತ್ನ ವಿರುದ್ಧ ಈ ಹಿಂದೆಯೂ ಒಮ್ಮೆ ಹಗರಣದ ಆರೋಪ ಕೇಳಿಬಂದಿತ್ತು. 2018 ರಲ್ಲಿ ಕಾಂಗ್ರೆಸ್ ಶಾಸಕರಾಗಿದ್ದ ಮುನಿರತ್ನ ನಕಲಿ ವೋಟರ್ ಐಡಿ ಸೃಷ್ಟಿಸಿದ ಆರೋಪದಲ್ಲಿ ಸಿಲುಕಿದ್ದರು. ಬೆಂಗಳೂರಿನ ಫ್ಲ್ಯಾಟ್ ಒಂದರಲ್ಲಿ ನಕಲಿ ವೋಟರ್ ಐಡಿ ತಯಾರಿಸಿದ ಆರೋಪದಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಅದಾದ ಬಳಿಕ ಮುನಿರತ್ನ ಕಾಂಗ್ರೆಸ್ ನಿಂದ ಬಿಜೆಪಿಗೆ ವಲಸೆ ಬಂದು ಕಳೆದ ಚುನಾವಣೆಯಲ್ಲೂ ಮತ್ತೊಮ್ಮೆ ಆರ್ ಆರ್ ನಗರದಿಂದ ಗೆದ್ದು ಶಾಸಕರಾಗಿದ್ದರು. ಇದೀಗ ಬೆದರಿಕೆ ಪ್ರಕರಣದಲ್ಲಿ ಅವರ ವಿರುದ್ಧ ಕೇಸ್ ದಾಖಲಾಗಿದೆ. ಈ ಪ್ರಕರಣದ ಕತೆ ಏನಾಗುವುದೋ ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಪಾಕಿಸ್ತಾನದ ಮೇಲೆ ಯುದ್ಧ ಮಾಡುವ ತಾಕತ್ತು ಭಾರತಕ್ಕಿಲ್ಲ, ಅದಕ್ಕೆ ನಾವು ಬಿಡುವುದೂ ಇಲ್ಲ: ಉಗ್ರ ಗುರುಪತ್ವಂತ್ ಸಿಂಗ್ ಪನ್ನು

18 ಶಾಸಕರ ಅಮಾನತು ರದ್ದು ಮಾಡಲು ವಿಜಯೇಂದ್ರ ಆಗ್ರಹ

Pehalgam ದಾಳಿಯಾದ್ರೂ ಪ್ರವಾಸಿಗರಿಗೆ ಚಿಂತೆಯಿಲ್ಲ: ದಾಳಿ ನಡೆದ ಕಾಶ್ಮೀರಕ್ಕೆ ಪ್ರವಾಸಿಗರ ದಂಡು

Pehalgam attack: ಪಹಲ್ಗಾಮ್ ಉಗ್ರರ ಸಂಚು ಹೇಗಿತ್ತು, ದಾಳಿಗೆ ಮುನ್ನ ಏನು ಮಾಡಿದ್ದರು ಇಲ್ಲಿದೆ ವಿವರ

Arecanut price today: ಅಡಿಕೆ ಬೆಳೆಗಾರರಿಗೆ ಇಂದು ಬಂಪರ್ ಸುದ್ದಿ, ಇಂದಿನ ದರ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments