Publish Date: Fri, 15 Apr 2022 (17:51 IST)
Updated Date: Fri, 15 Apr 2022 (18:05 IST)
ಬೈಕ್ನಲ್ಲಿ ಬರುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ಮಾಡಿದ್ದು, ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ವ್ಯಕ್ತಿ ಪಾರಾಗಿದ್ದಾರೆ..ಹಾಸನ ಜಿಲ್ಲೆ, ಅರಕಲಗೂಡು ತಾಲ್ಲೂಕಿನ ಕಂಠೇನಹಳ್ಳಿ ಬಳಿ ನಡೆದೆ ಘಟನೆ ಇದಾಗಿದೆ. ದೇವರಾಜೇಗೌಡ ಎಂಬುವವರು ಡೈರಿಗೆ ಹಾಲು ಹಾಕಲು ಬೈಕ್ನಲ್ಲಿ ಹೋಗುತ್ತಿದ್ದಾಗ ದಿಢೀರ್ ಕಾಡಾನೆ ದಾಳಿ ಮಾಡಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.