Webdunia - Bharat's app for daily news and videos

Install App

ಅಪರಾಧಗಳ ಹಿನ್ನೆಲೆ ಮಾತ್ರ ಗಣನೆ, ಧರ್ಮ ಅಲ್ಲ : ಆರಗ ಜ್ಞಾನೇಂದ್ರ

Webdunia
ಶುಕ್ರವಾರ, 23 ಸೆಪ್ಟಂಬರ್ 2022 (06:22 IST)
ಬೆಂಗಳೂರು : ಪೊಲೀಸರು ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳುವ ಮುನ್ನ ಕೇವಲ ಅಪರಾಧಗಳ ಹಿನ್ನೆಲೆ ಮಾತ್ರ ಪರಿಗಣಿಸುತ್ತಾರೆಯೇ ವಿನಃ ಅಲ್ಪಸಂಖ್ಯಾತ,

ಬಹು ಸಂಖ್ಯಾತರು, ಜಾತಿ ಅಥವಾ ಧರ್ಮವನ್ನು ನೋಡಿ ಅಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ, ಸೌಹಾರ್ದತೆ ಕಾಪಾಡುವ ಜವಾಬ್ದಾರಿ ಹೊತ್ತಿರುವ ಪೊಲೀಸ್ ಸಿಬ್ಬಂದಿಯೊಂದಿಗೆ ಎಲ್ಲರೂ ಸಹಕರಿಸಬೇಕು ಎಂದು ಹೇಳಿದರು.

ಕಾನೂನನ್ನು ಕೈಗೆ ತೆಗೆದುಕೊಳ್ಳುವ ಯಾರ ವಿರುದ್ಧವೇ ಆಗಲಿ, ಕ್ರಮ ಜರಗಿಸಲಾಗುತ್ತದೆ. ಖಚಿತ ಮಾಹಿತಿ ಮೇರೆಗೆ ಎನ್ಐಎ ಅಧಿಕಾರಿಗಳು ಹಲವು ಕಡೆ ಶೋಧ ನಡೆಸಿದ್ದಾರೆ. ಶಿವಮೊಗ್ಗ ಪೊಲೀಸರು ಇಬ್ಬರು ವ್ಯಕ್ತಿಗಳು ಭಯೋತ್ಪಾದಕ ಸಂಘಟನೆ ಜೊತೆ ಸಂಪರ್ಕ ಹೊಂದಿದ್ದಾರೆ ಎಂಬ ಮಾಹಿತಿ ಮೇರೆಗೆ ಬಂಧಿಸಿ, ತನಿಖೆ ನಡೆಸುತ್ತಿದ್ದಾರೆ ಎಂದರು. 

ತನಿಖೆಯನ್ನು ಚುರುಕಿನಿಂದ ನಡೆಸಿರುವ ಶಿವಮೊಗ್ಗ ಪೊಲೀಸರ ಕಾರ್ಯ ಕ್ಷಮತೆಯ ಬಗ್ಗೆ ಅಭಿನಂದಿಸುತ್ತೇನೆ ಎಂದು ಸಚಿವರು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments