Select Your Language

Notifications

webdunia
webdunia
webdunia
webdunia

ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯಿಂದ ನಾಳೆ ಸಭೆ

ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯಿಂದ ನಾಳೆ ಸಭೆ
bengaluru , ಬುಧವಾರ, 18 ಆಗಸ್ಟ್ 2021 (21:15 IST)
ಕೇಂದ್ರ ಸರ್ಕಾರ ಇತ್ತೀಚೆಗೆ ಲೋಕಸಭೆಯಲ್ಲಿ ಹಿಂದುಳಿದ ವರ್ಗಗಳ ವಿಷಯದಲ್ಲಿ ಮಂಡಿಸಿದ ಮಸೂದೆಯ ಕುರಿತು ದೇಶದಾದ್ಯಂತ ಚರ್ಚೆಯಾಗುತ್ತಿದೆ.
ಹಾಗೆಯೇ ಅತಿ ಹಿಂದುಳಿದ ಸಮುದಾಯಗಳ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಚರ್ಚೆ ನಡೆಸುವ ಉದ್ದೇಶದಿಂದ ದಿನಾಂಕ 19-08-2021 ನೇ ಗುರುವಾರ ಮಧ್ಯಾಹ್ನ 12-00 ಘಂಟೆಗೆ ಶಾಸಕರ ಭವನ-2, ನೆಲ ಮಹಡಿಯಲ್ಲಿನ ಸಮ್ಮೇಳನ ಸಭಾಂಗಣದಲ್ಲಿ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಪದಾಧಿಕಾರಿಗಳು, ಸದಸ್ಯರುಗಳ ಸಭೆ ನಡೆಸಲಿದ್ದಾರೆ.
ಈ ಮಹತ್ತರ ಸಭೆಗೆ ಸಮಾಜ ಕಲ್ಯಾಣ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಯವರು ಭಾಗವಹಿಸಲಿದ್ದು ಸದಸ್ಯರೊಂದಿಗೆ ಚರ್ಚೆ ನಡೆಸಲಿದ್ದಾರೆ. 
ಅಂತೆಯೇ ಅತಿ ಹಿಂದುಳಿದ ಸಮುದಾಯಗಳ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಮದ್ಯಾಹ್ನ 3 ಗಂಟೆಗೆ ಮಾನ್ಯ ಮುಖ್ಯ ಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿಯವರನ್ನು ಅವರ ಗೃಹಕಚೇರಿ 'ಕೃಷ್ಣ'ದಲ್ಲಿ ಭೇಟಿಯಾಗುವ ಕಾರ್ಯಕ್ರಮವೂ ನಿಗದಿಯಾಗಿದೆ. ಈ ಕಾರ್ಯಕ್ರಮದ ವರದಿಗೆ ನಿಮ್ಮ ಗೌರವಾನ್ವಿತ ಮಾಧ್ಯಮದ ಪ್ರತಿನಿಧಿಗಳನ್ನು ಕಳುಹಿಸಿಕೊಡುವಂತೆ ಕೋರಿದೆ. 
 

Share this Story:

Follow Webdunia kannada

ಮುಂದಿನ ಸುದ್ದಿ

ಅಕ್ಷಯ ಪಾತ್ರೆ ಯೋಜನೆಯ ಜೊತೆ ಕೈ ಜೋಡಿಸಿದ ಹೆಚ್ಎಎಲ್