Webdunia - Bharat's app for daily news and videos

Install App

ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯಿಂದ ನಾಳೆ ಸಭೆ

Webdunia
ಬುಧವಾರ, 18 ಆಗಸ್ಟ್ 2021 (21:15 IST)
ಕೇಂದ್ರ ಸರ್ಕಾರ ಇತ್ತೀಚೆಗೆ ಲೋಕಸಭೆಯಲ್ಲಿ ಹಿಂದುಳಿದ ವರ್ಗಗಳ ವಿಷಯದಲ್ಲಿ ಮಂಡಿಸಿದ ಮಸೂದೆಯ ಕುರಿತು ದೇಶದಾದ್ಯಂತ ಚರ್ಚೆಯಾಗುತ್ತಿದೆ.
ಹಾಗೆಯೇ ಅತಿ ಹಿಂದುಳಿದ ಸಮುದಾಯಗಳ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಚರ್ಚೆ ನಡೆಸುವ ಉದ್ದೇಶದಿಂದ ದಿನಾಂಕ 19-08-2021 ನೇ ಗುರುವಾರ ಮಧ್ಯಾಹ್ನ 12-00 ಘಂಟೆಗೆ ಶಾಸಕರ ಭವನ-2, ನೆಲ ಮಹಡಿಯಲ್ಲಿನ ಸಮ್ಮೇಳನ ಸಭಾಂಗಣದಲ್ಲಿ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಪದಾಧಿಕಾರಿಗಳು, ಸದಸ್ಯರುಗಳ ಸಭೆ ನಡೆಸಲಿದ್ದಾರೆ.
ಈ ಮಹತ್ತರ ಸಭೆಗೆ ಸಮಾಜ ಕಲ್ಯಾಣ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಯವರು ಭಾಗವಹಿಸಲಿದ್ದು ಸದಸ್ಯರೊಂದಿಗೆ ಚರ್ಚೆ ನಡೆಸಲಿದ್ದಾರೆ. 
ಅಂತೆಯೇ ಅತಿ ಹಿಂದುಳಿದ ಸಮುದಾಯಗಳ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಮದ್ಯಾಹ್ನ 3 ಗಂಟೆಗೆ ಮಾನ್ಯ ಮುಖ್ಯ ಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿಯವರನ್ನು ಅವರ ಗೃಹಕಚೇರಿ 'ಕೃಷ್ಣ'ದಲ್ಲಿ ಭೇಟಿಯಾಗುವ ಕಾರ್ಯಕ್ರಮವೂ ನಿಗದಿಯಾಗಿದೆ. ಈ ಕಾರ್ಯಕ್ರಮದ ವರದಿಗೆ ನಿಮ್ಮ ಗೌರವಾನ್ವಿತ ಮಾಧ್ಯಮದ ಪ್ರತಿನಿಧಿಗಳನ್ನು ಕಳುಹಿಸಿಕೊಡುವಂತೆ ಕೋರಿದೆ. 
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments