Webdunia - Bharat's app for daily news and videos

Install App

ಪ್ರಧಾನಿಗೆ ಗಂಡಾಂತರವಂತೆ… ಹೆಚ್ಡಿಕೆ ಸಿಎಂ ಆಗ್ತಾರಂತೆ…

Webdunia
ಶುಕ್ರವಾರ, 13 ಅಕ್ಟೋಬರ್ 2017 (09:40 IST)
ಹಾಸನ: ಪ್ರಧಾನಿ ನರೇಂದ್ರ ಮೋದಿಯವರಿಗೆ ಗಂಡಾಂತರ ಕಾದಿದೆಯಂತೆ. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮತ್ತೆ ಈ ರಾಜ್ಯದ ಮುಖ್ಯಮಂತ್ರಿಯಾಗುತ್ತಾರೆ ಎಂದು ಬ್ರಹ್ಮಾಂಡ ಗುರೂಜಿ ಖ್ಯಾತಿಯ ನರೇಂದ್ರ ಬಾಬು ಶರ್ಮಾ ಭವಿಷ್ಯ ನುಡಿದಿದ್ದಾರೆ.

ಹಾಸನಾಂಬೆ ದೇವಾಲಯದಲ್ಲಿ ಮಾತನಾಡಿದ ನರೇಂದ್ರ ಬಾಬು ಶರ್ಮಾ, ಪ್ರಧಾನಿ ಮೋದಿಯವರದ್ದು ವೃಶ್ಚಿಕ ರಾಶಿ. ಶನಿ ದೋಷವಿದೆ. ಶನಿ ಯಾರನ್ನೂ ಬಿಡಲ್ಲ. ಗುರು ತುಲಾ ರಾಶಿಗೆ ಪ್ರವೇಶಿಸಿದ್ದಾನೆ. ಹೀಗಾಗಿ ಉನ್ನತ ಸ್ಥಾನದಲ್ಲಿರುವ ಸೆಲೆಬ್ರಿಟಿ ಅಥವಾ ರಾಜಕಾರಣಿಗೆ ಗಂಡಾಂತರ ಕಾದಿದೆ ಎಂದು ಹೇಳಿದ್ದಾರೆ. ಇದಕ್ಕೆ ದೇವರ ಮೊರೆ ಹೋಗಿ ಪರಿಹಾರ ಕಂಡುಕೊಳ್ಳದಿದ್ದರೆ ಸಾವು ಸಂಭವಿಸಬಹುದು ಎಂದಿದ್ದಾರೆ.

ತಾಯಿ ಮತ್ತು ಪತ್ನಿಯಿಂದ ದೂರವಿರುವುದರಿಂದ ಶುಕ್ರ ದೋಷವೂ ಇದೆಯಂತೆ. ಗುಜರಾತ್‌ಮಹಿಳೆಯೊಬ್ಬಳು ಮೋಹಿಸಲಿದ್ದು, ಇದು ಮೋದಿಯವರಿಗೆ ಮುಳುವಾಗಲಿದೆ ಎಂದಿದ್ದಾರೆ.

ಮುಂಬರುವ ಚುನಾವಣೆಯಲ್ಲಿ ಹೆಚ್ ಡಿಕೆ ಕಿಂಗ್ ಮೇಕರ್ ಆಗಲಿದ್ದು, ಮತ್ತೊಮ್ಮೆ ಸಿಎಂ ಆಗೋ ಯೋಗವಿದೆ. ಹಾಲಿ ಸಿಎಂ ಸಿದ್ದರಾಮಯ್ಯ ಈವರೆಗೂ ಮಾಡಿರುವ ತಪ್ಪನ್ನು ಸರಿಪಡಿಸಿಕೊಳ್ಳಬೇಕು. ಇನ್ನು ಯಡಿಯೂರಪ್ಪ ಅವರದ್ದು ಹಿತ್ತಾಳೆ ಕಿವಿ. ಜೊತೆಯಲ್ಲಿ ವಿಷವಿಟ್ಟುಕೊಂಡು ಓಡಾಡುತ್ತಿದ್ದಾರೆ. ಪಕ್ಷದಲ್ಲಿ ಬಿಎಸ್ ವೈ ಸ್ಥಾನಪಲ್ಲಟ ಖಚಿತ ಎಂದು ಹೇಳಿದ್ದಾರೆ ಎಂದು ತಿಳಿದು ಬಂದಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments