Publish Date: Wed, 23 Oct 2019 (19:11 IST)
Updated Date: Wed, 23 Oct 2019 (19:13 IST)
ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಗೆ ಜಾಮೀನು ಮಂಜೂರಾದ ಹಿನ್ನಲೆಯಲ್ಲಿ ಕೈಪಾಳೆಯದ ಮುಖಂಡರು, ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದಾರೆ.
ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಹಿಸಿ ಹಂಚಿ ಸಂಭ್ರಮಿಸಿದರು.
ದುರ್ಗದ ಬೈಲ್ ನಲ್ಲಿ ಕಾಂಗ್ರೆಸ್ ಗ್ರಾಮೀಣ ಜಿಲ್ಲಾಧ್ಯಕ್ಷ ಅನಿಲಕುಮಾರ ಪಾಟೀಲ ನೇತೃತ್ವದಲ್ಲಿ ಸಂಭ್ರಮ ಆಚರಣೆ ನಡೆಯಿತು. ಡಿ.ಕೆ.ಶಿವಕುಮಾರ ಪರ ಕಾರ್ಯಕರ್ತರು ಜಯ ಘೋಷ ಕೂಗಿದರು. ಅಲ್ಲದೇ ಕಾಂಗ್ರೆಸ್ ಪಕ್ಷಕ್ಕೆ ಜಯವಾಗಲಿ ಎಂದು ಘೋಷಣೆ ಕೂಗಿದ್ರು.