Select Your Language

Notifications

webdunia
webdunia
webdunia
webdunia

ರೌಡಿಶೀಟರ್ ಬಿಕ್ಲು ಶಿವ ಕೊಲೆ ಕೇಸ್‌ನಲ್ಲಿ ಕೊನೆಗೂ ಖಾಕಿ ಕೈಗೆ ಸಿಕ್ಕಿಬಿದ್ದ ಬೈರತಿ ಬಸವರಾಜ್, ಲಾಕ್ ಆಗಿದ್ದು ಎಲ್ಲಿ ಗೊತ್ತಾ

MLA Bairathi Suresh

Sampriya

ಬೆಂಗಳೂರು , ಗುರುವಾರ, 12 ಫೆಬ್ರವರಿ 2026 (19:38 IST)
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಈಚೆಗೆ ಜಾಮೀನು ನಿರಾಕರಣೆಯಾದ ಬೆನ್ನಲ್ಲೇ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರನ್ನು ಅರೆಸ್ಟ್ ಮಾಡಿದ್ದಾರೆ. 

ಇಂಡಿಗೋ ವಿಮಾನದಲ್ಲಿ ಅಹಮದಾಬಾದ್‌ನಿಂದ ಬೆಂಗಳೂರಿಗೆ ಆಗಮಿಸಿದ ಬಸವರಾಜ್‌ ಅವರನ್ನು ವಿಮಾನ ನಿಲ್ದಾಣದ ಟರ್ಮಿನಲ್‌ 1 ರಲ್ಲಿ ಅರೆಸ್ಟ್ ಮಾಡಲಾಗಿದೆ.

ಇನ್ನೂ ವಿಮಾನದಲ್ಲಿ ಬರುತ್ತಿರುವ ಖಚಿತ ಮಾಹಿತಿ ಸಿಕ್ಕಿದ ಹಿನ್ನೆಲೆಯಲ್ಲಿ ಅವರನ್ನು ವಶಕ್ಕೆ ಪಡೆಯಲು ಪೊಲೀಸರು ಮೊದಲೇ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಬಸವರಾಜ್‌ ಬರುತ್ತಿದ್ದಂತೆ ಎಸಿಪಿ ಹರ್ಷ ಅವರು ವಶಕ್ಕೆ ಪಡೆದರು.

ಇನ್ನೂ ಗುರುತು ಪತ್ತೆಯಾಗದಂತೆ ವಿಮಾನ ನಿಲ್ದಾಣದಲ್ಲಿ ಬಸವರಾಜ್ ಮುಖಕ್ಕೆ ಸಫಾರಿ ಮಾಸ್ಕ್‌ ಧರಿಸಿದ್ದರು.


ಹೈಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ವಜಾಗೊಂಡ ಬೆನ್ನಲ್ಲೇ ಸುಪ್ರೀಂಕೋರ್ಟ್ ಮೊರೆ ಹೋಗಿದ್ದ ಬೈರತಿ ಬಸವರಾಜ್‌ಗೆ ಅಲ್ಲಿಯೂ ಹಿನ್ನಡೆಯಾಗಿತ್ತು.. ಬೈರತಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿತ್ತು.




Share this Story:

Follow Webdunia kannada

ಮುಂದಿನ ಸುದ್ದಿ

ಭಾರತಕ್ಕೆ ವಾಪಾಸ್‌ ಬಂದ್ರೆ ಅಷ್ಟೆ, ವಿಜಯ್ ಮಲ್ಯಗೆ ಹೈಕೋರ್ಟ್ ಚಾಟಿ