ಬೈರತಿ ಸುರೇಶ್‌ಗೆ ತಾಕತ್ತಿದ್ದರೆ ಅಕ್ರಮ ದಾಖಲೆ ಬಿಡುಗಡೆ ಮಾಡಲಿ: ಶೋಭಾ ಸವಾಲು

Sampriya
ಭಾನುವಾರ, 27 ಅಕ್ಟೋಬರ್ 2024 (12:43 IST)
Photo Courtesy X
ಬೆಳಗಾವಿ: ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರಿಗೆ ತಾಕತ್ತಿದ್ದರೆ ನನ್ನ ಅಕ್ರಮದ ದಾಖಲೆ ಬಿಡುಗಡೆಗೊಳಿಸಲಿ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಸವಾಲು ಹಾಕಿದರು.

ಬೈರತಿ ಸುರೇಶ ‌ಅವರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಿಸಿದ ಸಾವಿರಾರು ಕಡತಗಳನ್ನು ತಂದು, ಸುಟ್ಟು ಹಾಕಿದ್ದಾರೆ. ಅದರ ಬಗ್ಗೆ ನಾನು ಧ್ವನಿ ಎತ್ತಿದ್ದಕ್ಕೆ ನನ್ನ ವಿರುದ್ಧ ಬೇರೆ ಬೇರೆ ಆರೋಪ ಮಾಡುತ್ತಿದ್ದಾರೆ ಎಂದು ಶೋಭಾ ಹೇಳಿದರು.

ಬೈರತಿ ಸುರೇಶ್ ಅವರಿಗೆ ಈಗ ಸಂಕಷ್ಟ ಶುರುವಾಗಿದೆ. ಅವರು ಮೈಸೂರಿನಿಂದ ಕಡತ ತಂದಿದ್ದು ಸತ್ಯ. ಸುಟ್ಟು ಹಾಕಿದ್ದು ಸತ್ಯ. ಮುಡಾ ಹರಗಣದ ಬಗ್ಗೆ ತನಿಖೆ ಆರಂಭವಾಗಿದೆ. ಈ ಭಯದಿಂದ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಆಪಾದಿಸಿದರು.


ಈ ಹಿಂದೆ ಹಲವಾರು ಸರ್ಕಾರದವರು ನನ್ನ ಬಗ್ಗೆ ಆರೋಪ ಮಾಡಿ, ತನಿಖೆ ಮಾಡಿದರು. ಆದರೆ, ಶೋಭಾ ಕರಂದ್ಲಾಜೆ ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಮುಂದೆಯೂ ಮಾಡುವುದಿಲ್ಲ ಎಂದು ತಿರುಗೇಟು ಕೊಟ್ಟರು.

ನನ್ನ ವಿರುದ್ಧ ದಾಖಲೆ ಬಹಿರಂಗಕ್ಕೆ ಮುಖ್ಯಮಂತ್ರಿ  ಕಾನೂನು ಸಲಹೆಗಾರ ಪೊನ್ನಣ್ಣ ಅವರನ್ನು ನೇಮಿಸಲಾಗಿದೆ. ಆದರೆ, ಪೊನ್ನಣ್ಣ ಅವರಿಗೂ ವಿದ್ಯುತ್ ಇಲಾಖೆಗೂ ಏನು ಸಂಬಂಧ? ನಕಲಿ ಕಡತ ಸೃಷ್ಟಿಸಲು ಪೊನ್ನಣ್ಣ ಅವರಿಗೆ ಜವಾಬ್ದಾರಿ ಕೊಟ್ಟಿದ್ದೀರಿ. ಇದರಲ್ಲೂ ಒಂದು ಭ್ರಷ್ಟಾಚಾರ ಮಾಡಲು ಹೊರಟಿದ್ದೀರಿ. ನಿಮ್ಮ ಬಳಿ ಇರುವ ದಾಖಲೆ ತಕ್ಷಣವೇ ಹೊರಗೆ ಹಾಕಿ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳನ್ನು ಟಾರ್ಗೆಟ್ ಮಾಡಲಾಗಿದೆ: ಡಿಸಿಎಂ ಪವನ್ ಕಲ್ಯಾಣ್

ರಾಜ್ಯದಲ್ಲಿರುವ ಡ್ರಗ್ಸ್‌ ದಂಧೆ ವಿರುದ್ಧ ಕಠಿಣ ಕ್ರಮ, ಪೆಡ್ಲರ್‌ಗಳಿಗೆ ನಡುಕ

ಮತ್ತಷ್ಟು ಹಣ ಕೊಡದಿದ್ದರೆ ಬೆತ್ತಲೆ ಫೋಟೋ ವೈರಲ್ ಬೆದರಿಕೆ, ಯುವಕ ಆತ್ಮಹತ್ಯೆ

ಮೋದಿ ಬಳಿಕ ಬಿಜೆಪಿಯಿಂದ ಪ್ರಧಾನಿ ಅಭ್ಯರ್ಥಿ ಯಾರು: ಕೊನೆಗೂ ತಿಳಿಸಿದ ಮೋಹನ್ ಭಾಗವತ್

ಸಿದ್ದರಾಮಯ್ಯ ಇರುವಷ್ಟು ದಿನ ಉತ್ತಮ ಹೆಜ್ಜೆ ಇಡಲಿ: ವಿಜಯೇಂದ್ರ

ಮುಂದಿನ ಸುದ್ದಿ
Show comments