ಭಜರಂಗದಳ ಸಂಚಾಲಕ ತೇಜಸ್ ಗೌಡ ವಶಕ್ಕೆ

Webdunia
ಮಂಗಳವಾರ, 29 ನವೆಂಬರ್ 2022 (17:35 IST)
ಕಳೆದ ಏಳೆಂಟು ತಿಂಗಳಿನಿಂದ ಶಾಂತವಾಗಿದ್ದ ಧರ್ಮ ದಂಗಲ್ ಮತ್ತೆ ಶುರುವಾಗಿದೆ. ಇಂದು ಬೆಂಗಳೂರಿನ ವಿವಿ ಪುರಂಸುಬ್ರಹ್ಮಣ್ಯ ಸ್ವಾಮಿ ಜಾತ್ರೆ  ನಡೆಯಲಿದೆ. ಜಾತ್ರೆಯಲ್ಲಿ ಅನ್ಯ ಧರ್ಮೀಯರ ವ್ಯಾಪಾರಕ್ಕೆ ಅವಕಾಶ ಕೊಡದಂತೆ ಹಿಂದೂ ಸಂಘಟನೆಗಳು  ಒತ್ತಾಯಿಸಿದ್ದವು. ಹಿಂದೂ ಸಂಘಟನೆಗಳಿಂದ ಆಂತರಿಕ ಸಭೆ ನಡೆದಿದ್ದು, ಅನ್ಯಧರ್ಮೀಯರ ವ್ಯಾಪಾರಕ್ಕೆ  ಅವಕಾಶ ಕೊಡಬಾರದು ಎಂಬ ನಿರ್ಣಯ ಮಾಡಿದ್ದಾರೆ. ಆದರೆ ಶಾಸಕ ಉದಯ್ ಗರುಡಾಚಾರ್  ಎಲ್ಲಾ ಧರ್ಮದವರಿಗೂ ಅವಕಾಶ ನೀಡಲಾಗುವುದು ಎಂದು ಹೇಳುವ ಮೂಲಕ ಹಿಂದೂ ಸಂಘಟನೆಗಳಿಗೆ ಎಚ್ಚರಿಕೆ ನೀಡಿದ್ದರು.  ಜಾತ್ರೆಯಲ್ಲಿ ಗಲಭೆಗಳಿಗೆ ಅವಕಾಶ ಇಲ್ಲ. ಹಾಗೇನಾದ್ರೂ ಗಲಭೆ ಮಾಡಲು ಮುಂದಾದ್ರೆ ಕಾನೂನು ಕ್ರಮ ಕೈಗೊಳ್ಳುತ್ತೇವೆ ಅಂತಾ ಎಚ್ಚರಿಕೆ ಕೊಟ್ಟಿದ್ದರು. ಇತ್ತ ಶಾಸಕರ ಎಚ್ಚರಿಕೆ ಬೆನ್ನಲ್ಲೇ ಟ್ವಿಟರ್‌, ವಾಟ್ಸಾಪ್‌ನಲ್ಲಿ ಹಿಂದೂ ಸಂಘಟನೆಗಳು ಅನ್ಯ ಧರ್ಮೀಯರ ಅಂಗಡಿಗಳಿಗೆ ಹೋಗದಂತೆ ಅಭಿಯಾನ ಆರಂಭಿಸಿವೆ. ಜಾತ್ರೆಯಲ್ಲಿ ಹಿಂದೂಗಳ ಬಳಿಯೇ ಖರೀದಿಸಿ ಎಂದು ಅಭಿಯಾನ ಮಾಡುತ್ತಿವೆ. ಇನ್ನು  ಜಾತ್ರೆಯಲ್ಲಿ ಹಿಂದೂಯೇತರರಿಗೆ ವ್ಯಾಪಾರಕ್ಕೆ ಅವಕಾಶ ನೀಡಲ್ಲ ಎಂದು ಹೇಳಿದ್ದ ಭಜರಂಗದಳದ ಸಂಚಾಲಕ ತೇಜಸ್ ಗೌಡ ವಶಕ್ಕೆ ಪಡೆಯಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ರಾಜ್ಯ ಭೇಟಿ ಹಿಂದಿದೆಯಾ ಈ ಲೆಕ್ಕಚಾರ

ಈ ದಿನದವರೆಗೆ ಕರಾವಳಿ ಭಾಗದಲ್ಲಿ ನಿರೀಕ್ಷೆಗೂ ಮೀರಿದ ಮಳೆ, ಇಲ್ಲಿದೆ ಡಿಟೇಲ್ಸ್‌

ಶ್ವೇತಭವನದ ಬಳಿ ಗುಂಡು ಹಾರಿಸಿದ್ದ ಬಂದೂಕುಧಾರಿಯ ಹತ್ಯೆ, ಏನಿದು ಘಟನೆ

Karnataka Weather: ರಾಜ್ಯದಲ್ಲಿ ಇಂದು ಹೇಗಿರಲಿದೆ ಗೊತ್ತಾ ಹವಾಮಾನ

ತರಗತಿಯಲ್ಲಿ ನಿರತರಾದ ವಿದ್ಯಾರ್ಥಿಗಳ ಮೇಲೆ ಬಿದ್ದ ಫ್ಯಾನ್‌, ಮುಂದೇನಾಯ್ತು ನೋಡಿ

ಮುಂದಿನ ಸುದ್ದಿ
Show comments