Webdunia - Bharat's app for daily news and videos

Install App

ಟೀ ಕುಡಿದ ಹಣ ಕೇಳಿದ್ದಕ್ಕೆ ಬೇಕರಿ ಮಾಲೀಕನ ಮೇಲೆ ಹಲ್ಲೆ

Webdunia
ಶನಿವಾರ, 20 ಅಕ್ಟೋಬರ್ 2018 (15:14 IST)
ಟೀ ಕುಡಿದ ಹಣವನ್ನು ಕೇಳಿದ ಬೇಕರಿ ಮಾಲೀಕ ಸೇರಿ ಅಲ್ಲಿ ಕೆಲಸ ಮಾಡುವಂತವರ ಮೇಲೆ ನಾಲ್ಕು ಜನ ಕಿಡಿಗೇಡಿಗಳು ಹಲ್ಲೆ ನಡೆಸಿರುವಂತಹ ಘಟನೆ ನಡೆದಿದೆ.

ಆನೇಕಲ್ ತಾಲ್ಲೂಕಿನ ಸರ್ಜಾಪುರ ಸಮೀಪದ ಬಿಲ್ಲಾಪುರಗೇಟ್ ಪಿಂಪಲ್ಸ್ ಮಾರ್ಟ್ ಬಳಿ‌ ಈ ಘಟನೆ ನಡೆದಿದೆ. ಇನ್ನು ಈ ಘಟನೆ ರಾತ್ರಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ನಾಲ್ಕು ಜನ ಕಿಡಿಗೇಡಿಗಳು ಬೇಕರಿಗೆ ಬಂದು ಟೀ ಯನ್ನು ಕುಡಿದಿದ್ದಾರೆ. ನಂತರ ಹಣ ಕೇಳಿದ ಬೇಕರಿ ಮಾಲೀಕ ಸೇರಿ ಅಲ್ಲಿ ಕೆಲಸ ಮಾಡುವಂತವರ ಮೇಲೆ ಈ ನಾಲ್ಕು ಜನ ಕಿಡಿಗೇಡಿಗಳು ಮನಬಂದಂತೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಈ ಕಿಡಿಗೇಡಿಗಳ ದುಂಡಾವರ್ತನೆಯ ದೃಶ್ಯಗಳು ಬೇಕರಿಯಲ್ಲಿದ್ದ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಯುವಕರು ಸ್ಥಳೀಯ ನಿವಾಸಿಗಳಾಗಿದ್ದು ಪೊಲೀಸರ ಹಾಗೂ ಜನಪ್ರತಿನಿಧಿಗಳು ಇವರ ಬೆಂಬಲಕ್ಕೆ ನಿಂತಿದ್ದಾರೆ ಎನ್ನಲಾಗಿದೆ. ಇಂತಹ ಪ್ರಕರಣಗಳು ಪದೇ ಪದೇ ನಡೆಯುತ್ತಿದ್ದರೂ ಪೊಲೀಸರು ಯಾವ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಅಲ್ಲಿನ ನಿವಾಸಿಗಳು ಆರೋಪಿಸುತ್ತಾರೆ. ಇನ್ನು ಹಲ್ಲೆಗೊಳಗಾದ ಬೇಕರಿ ಮಾಲೀಕ ಬದ್ರುದ್ದೀನ್ ಸರ್ಜಾಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿ ಆ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ರಕ್ಷಣೆ ಕೋರಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments