ಮುಸ್ಲಿಂ ಸಮುದಾಯದಿಂದ ಬಕ್ರೀದ್ ಆಚರಣೆ

Webdunia
ಭಾನುವಾರ, 10 ಜುಲೈ 2022 (19:14 IST)
ವಿಶ್ವದೆಲ್ಲೆಡೆ ಇಂದು ಬಕ್ರೀದ್‌ ಹಬ್ಬವನ್ನು ಆಚರಿಸಲಾಗುತ್ತಿದೆ. ಭಾರತದಲ್ಲೂ ಮುಸ್ಲಿಮರು ಬಕ್ರೀದ್‌ ಶುಭಾಶಯಗಳನ್ನು ಹಂಚಿಕೊಂಡು ಆಚರಣೆಯಲ್ಲಿ ತೊಡಗಿದ್ದಾರೆ. ಬಕ್ರೀದ್‌ ಬಲಿದಾನದ ಹಬ್ಬವನ್ನಾಗಿ ಆಚರಣೆ ಮಾಡಲಾಗುತ್ತದೆ. ರಾಜ್ಯದಾದ್ಯಂತ ಹಬ್ಬವನ್ನು ಆಚರಣೆ ಮಾಡುವ ಸಂದರ್ಭದಲ್ಲಿ ಕೆಲ ಕಾನೂನು ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಲು ಸರ್ಕಾರ ಹೊಸ ಮಾರ್ಗ ಸೂಚಿ ಬಿಡುಗಡೆ ಮಾಡಿದೆ. ಹಬ್ಬದ ದಿನದ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸುವವರು ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಬೇಕು. ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಾರ್ವತ್ರಿಕ ಅಧಿನಿಯಮ 2020ರ ನಿಯಮಗಳು ಉಲ್ಲಂಘನೆಯಾಗದಂತೆ ಖುರ್ಬಾನಿ ನೆರವೇರಿಸಬೇಕು. ಸಾರ್ವಜನಿಕ ಪ್ರದೇಶ, ರಸ್ತೆಗಳು, ಶಾಲಾ ಕಾಲೇಜು, ಆಸ್ಪತ್ರೆ ಆವರಣಗಳಲ್ಲಿ ಖುರ್ಬಾನಿಯನ್ನು ನಿಷೇಧಿಸಲಾಗಿದೆ. ಸ್ಥಳೀಯಾಡಳಿತ ನಿಗದಿಪಡಿಸಿದ ಸ್ಥಳಗಳಲ್ಲಿ ಮಾತ್ರ ಖುರ್ಬಾನಿ ನೆರವೇರಿಸಬೇಕು.ಖುರ್ಬಾನಿ ನೆರವೇರಿಸುವಾಗ ಶುಚಿತ್ವ ಮತ್ತು ನೈರ್ಮಲ್ಯವನ್ನು ಕಡ್ಡಾಯವಾಗಿ ಕಾಪಾಡಬೇಕು. ಪ್ರಾಣಿ ತ್ಯಾಜ್ಯವನ್ನು ಪರಿಣಾಮಕಾರಿಯಾಗಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಬೇಕು. ಪೊಲೀಸ್ ಇಲಾಖೆ, ಪಶು ಪಾಲನಾ ಮತ್ತು ಪಶು ವೈದ್ಯ ಸೇವೆ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯವರು ನೀಡುವ ಸಾಮಾನ್ಯ ಹಾಗೂ ಸ್ಥಳೀಯವಾಗಿ ನೀಡುವ ನಿರ್ದೇಶಗಳನ್ನು ಕಡ್ಡಾಯವಾಗಿ ಪಾಲಿಸಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ, ಗೂಂಡಾ ಸಂಸ್ಕೃತಿ ಎಂದು ಟೀಕೆ

ವಿದ್ಯಾರ್ಥಿಗಳಿಗೆ ಯಾಕೆ ಲಾಠಿ ಏಟು ಕೊಟ್ರಿ: ಪ್ರಧಾನಿ ಮೋದಿ ಟ್ವೀಟ್ ಗೆ ಮಲ್ಲಿಕಾರ್ಜುನ ಖರ್ಗೆ ತಿರುಗೇಟು

ಹೊಲದಲ್ಲಿ ಸುಸ್ತಾಗಿ ಮಲಗಿದ್ದ ರೈತನ ಆ ಭಾಗದಲ್ಲಿ ಹೊಕ್ಕಿತ್ತು ನಾಗರಹಾವು: ಮುಂದೇನಾಯ್ತು, ರೋಮಾಂಚಕ Video

ವಿದ್ಯಾರ್ಥಿಗಳ ಭವಿಷ್ಯಕ್ಕಿಂತ ಯಾವುದೂ ಮುಖ್ಯ ಅಲ್ಲ, ಯಾರನ್ನೂ ಬಿಡಲ್ಲ: ನೀಟ್ ಅಕ್ರಮದ ಬಗ್ಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ

ಅಯ್ಯೋ ಇದೆಂಥಾ ಭೀಕರ ಸಾವು.. ಎರಡು ಬಸ್ ಗಳ ನಡುವೆ ಸಿಲುಕಿದ ಮಹಿಳೆ ಕತೆ ಏನಾಯ್ತು ನೋಡಿ Video

ಮುಂದಿನ ಸುದ್ದಿ
Show comments