Webdunia - Bharat's app for daily news and videos

Install App

Bakrid: ಬಕ್ರೀದ್ ಹಬ್ಬದ ಹಿನ್ನಲೆ, ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ಬದಲು: ಬದಲಿ ಮಾರ್ಗ ಇಲ್ಲಿದೆ

Krishnaveni K
ಶನಿವಾರ, 7 ಜೂನ್ 2025 (09:34 IST)
ಬೆಂಗಳೂರು: ಬಕ್ರೀದ್ ಹಬ್ಬದ ಹಿನ್ನಲೆಯಲ್ಲಿ ಬೆಂಗಳೂರಿನ ಹಲವು ರಸ್ತೆಗಳಲ್ಲಿ ಇಂದು ಸಂಚಾರ ಮಾರ್ಗವನ್ನೇ ಬದಲಾಯಿಸಲಾಗಿದೆ. ಈ ಬಗ್ಗೆ ಸಂಚಾರಿ ಪೊಲೀಸರು ಪ್ರಕಟಣೆ ನೀಡಿದ್ದಾರೆ.

ಬಕ್ರೀದ್ ಹಬ್ಬದ ಹಿನ್ನಲೆಯಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಮಾಡುವ ಕಾರಣದಿಂದ ಪುಲಕೇಶಿನಗರ, ಕೆಜಿ ಹಳ್ಳಿ, ಮಿಲ್ಲರ್ಸ್ ರಸ್ತೆ, ಹೇನ್ಸ್ ರಸ್ತೆ, ನಂದಿದುರ್ಗ ರಸ್ತೆಗಳಲ್ಲಿ ಸಂಚಾರ ಬದಲಾವಣೆಯಾಗಲಿದೆ. ಇನ್ನು ಕೆಲವೆಡೆ ವಾಹನ ನಿಲುಗಡೆಗೆ ನಿಷೇಧ ಹೇರಲಾಗಿದೆ. ಬದಲಿ ಮಾರ್ಗಗಳನ್ನು ನೀಡಲಾಗಿದೆ.

 
ಈ ರಸ್ತೆಯಲ್ಲಿ ಹೋಗಬೇಡಿ
-ಮಿಲ್ಲರ್ ರಸ್ತೆ ಕಂಟೋನ್ಮೆಂಟ್ ಅಂಡರ್ ಬ್ರಿಡ್ಜ್ ನಿಂದ ಹೇನ್ಸ್ ಜಂಕ್ಷನ್ ವರೆಗೆ ಎರಡೂ ಬದಿ ಸಂಚಾರ ನಿರ್ಬಂಧಿಸಲಾಗಿದೆ.
-ಹೇನ್ಸ್ ಜಂಕ್ಷನ್ ನಿಂದ ಮಿಲ್ಲರ್ ರಸ್ತೆ ಕಂಟೋನ್ಮೆಂಟ್ ಅಂಡರ್ ಬ್ರಿಡ್ಜ್ ವರೆಗೆ ಎರಡೂ ಕಡೆಗೆ ಸಂಚಾರ ನಿರ್ಬಂಧಿಸಲಾಗಿದೆ.
-ನಂದಿ ದುರ್ಗ ರಸ್ತೆ- ಬೆನ್ಸನ್ ಕ್ರಾಸ್ ರಸ್ತೆ ಜಂಕ್ಷನ್ ನಿಂದ ಮಿಲ್ಲರ್ಸ್ ರಸ್ತತೆ ಜಂಕ್ಷನ್ ವರೆಗೆ ಎರಡು ಬದಿ ಸಂಚಾರ ನಿರ್ಬಂಧಿಸಲಾಗಿದೆ.

ಯಾವ ರಸ್ತೆಯಲ್ಲಿ ಹೋಗಬೇಕು?
-ಮಿಲ್ಲರ್ ರಸ್ತೆ ಕಂಟೋನ್ಮೆಂಟ್ ಅಂಡರ್ ಬ್ರಿಡ್ಜ್ ರಸ್ತೆಯಿಂದ ಪುಲಿಕೇಶಿ ನಗರಕ್ಕೆ ಹೋಗುವ ವಾಹನಗಳು ಮಿಲ್ಲರ್ಸ್ ರಸ್ತೆಯಲ್ಲಿ ಬಲ ತಿರುವು ಪಡೆದು ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದ ಮುಂಭಾಗ ಕಂಟೋನ್ಮೆಂಟ್ ರಸ್ತೆಯಲ್ಲಿ ಸಾಗಿ ಜಂಬೂಬಜಾರ್ ಜಂಕ್ಷನ್ ತಲುಪಿ ನಂತರ ನೇತಾಜಿ ರಸ್ತೆ ಮುಖಾಂತರ ಪುಲಿಕೇಶಿನಗರ ಕಡೆಗೆ ಹೋಗಬಹುದು.

-ಹೇನ್ಸ್ ಜಂಕ್ಷನ್ ನಿಂದ ಜಯಮಹಲ್ ರಸ್ತೆ ಕಡೆಗೆ ಸಂಚರಿಸುವವರು ಹೇನ್ಸ್ ರಸ್ತೆಯಲ್ಲಿ ನೇರವಾಗಿ ಹೋಗಿ ಧನಕೋಟಿ ರಸ್ತೆಯಲ್ಲಿ ಬಲತಿರುವು ಪಡೆದು ಎಂಎಂ ರಸ್ತೆ ಮುಖಾಂತರ ಬಂಬೂಬಜಾರ ತಲುಪಿ ಕಂಟೋನ್ಮೆಂಟ್ ಸಾಗಿ ಕ್ವೀನ್ಸ್ ರಸ್ತೆ-ತಿಮ್ಮಯ್ಯ ರಸ್ತೆ ಮುಖಾಂತರ ಜಯಮಹಲ್ ಕಡೆಗೆ ಹೋಗಬಹುದು.

-ನಂದಿ ದುರ್ಗ ರಸ್ತೆಯಿಂದ ಪುಲಿಕೇಶಿ ನಗರಕ್ಕೆ ಸಂಚರಿಸಬೇಕಾದರೆ ನಂದಿದುರ್ಗ ರಸ್ತೆ ಬೆನ್ಸನ್ ಕ್ರಾಸ್ ನಲ್ಲಿ ಎಡತಿರುವು ಪಡೆದು ಬೆನ್ಸನ್ ಕ್ರಾಸ್ ರಸ್ತೆಯಲ್ಲಿ ಸಾಗಿ ಬೋರ್ ಬಂಕ್ ರಸ್ತೆಯಲ್ಲಿ ಎಡತಿರುವು ಪಡೆದು ನೇರವಾಗಿ ಪಾಟರಿ ಜಂಕ್ಷನ್ ತಲುಪಿ ಬಲತಿರುವು ಪಡೆದು ಪುಲಿಕೇಶಿ ನಗರಕ್ಕೆ ಸಂಚರಿಸಬಹುದು.

ಈ ಸ್ಥಳದಲ್ಲಿ ಪಾರ್ಕಿಂಗ್ ಇರಲ್ಲ
ಕಂಟೋನ್ಮೆಂಟ್ ರಸ್ತೆ, ಸೈಂಟ್ ಜಾನ್ಸನ್ ರಸ್ತೆ, ಮಿಲ್ಲರ್ಸ್ ರಸ್ತೆ, ನಂದಿದುರ್ಗ ರಸ್ತೆ, ಹೇನ್ಸ್ ರಸ್ತೆ, ನೇತಾಜಿ ರಸ್ತೆ, ಹೆಚ್ ಎಂ ರಸ್ತೆ, ಎಂಎಂ ರಸ್ತೆಯಲ್ಲಿ ಇಂದು ಪಾರ್ಕಿಂಗ್ ಗೆ ನಿಷೇಧ ಹೇರಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments