Webdunia - Bharat's app for daily news and videos

Install App

ದಸರಾದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಆನೆ ಬಲರಾಮ ಇನ್ನಿಲ್ಲ

Webdunia
ಸೋಮವಾರ, 8 ಮೇ 2023 (11:03 IST)
ಮೈಸೂರು : ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಮೈಸೂರು ದಸರಾ ಗಜಪಡೆಯ ಮಾಜಿ ಕ್ಯಾಪ್ಟನ್ ಬಲರಾಮ ಆನೆ (67) ಸಾವನ್ನಪ್ಪಿದೆ.
 
ನಾಗರಹೊಳೆ ಉದ್ಯಾನದ ಹುಣಸೂರು ರೇಂಜ್ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿದ್ದ ಬಲರಾಮ ಆನೆಯ ಬಾಯಿಯಲ್ಲಿ ಹುಣ್ಣಾಗಿತ್ತು. ಇದರಿಂದ ಆನೆ ಆಹಾರ, ನೀರು ಸೇವಿಸಲು ಆಗದಂತಹ ಸ್ಥಿತಿ ಉಂಟಾಗಿತ್ತು. ಪರಿಣಾಮವಾಗಿ ಬಲರಾಮ ಆನೆ ನಿತ್ರಾಣಗೊಂಡಿತ್ತು. ಆನೆಗೆ ಶಿಬಿರದಲ್ಲೇ ಪಶುವೈದ್ಯರು ಚಿಕಿತ್ಸೆ ನೀಡುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಆನೆ ಮೃತಪಟ್ಟಿದೆ. 

ಬಲರಾಮ ಆನೆ ವಿಶ್ವವಿಖ್ಯಾತ ಮೈಸೂರು ದಸರಾದ ಜಂಬೂಸವಾರಿ ಮೆರವಣಿಗೆಯಲ್ಲಿ ಬರೋಬ್ಬರಿ 14 ಬಾರಿ ಚಿನ್ನದ ಅಂಬಾರಿ ಹೊತ್ತು ಖ್ಯಾತಿ ಗಳಿಸಿತ್ತು. ಅತ್ಯಂತ ಸೌಮ್ಯ ಸ್ವಭಾವದ ಆನೆ ಎಂದು ಗಮನ ಸೆಳೆದಿತ್ತು. ಬಲರಾಮ ಆನೆ ಮೇಲೆ ಜನರಲ್ಲಿ ವಿಶೇಷ ಪ್ರೀತಿ ಇತ್ತು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments