ಸಿಎಂ ಸ್ಥಾನದಿಂದ ಮೋದಿಯನ್ನ ಇಳಿಸದಂತೆ ಅಡ್ವಾಣಿಗೆ ಹೇಳಿದ್ದ ಬಾಳಾಠಾಕ್ರೆ

Webdunia
ಸೋಮವಾರ, 2 ಮೇ 2022 (18:08 IST)
ಗುಜರಾತ್‌ನ ಅಂದಿನ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಅವರನ್ನು ಗೋಧ್ರೋತ್ತರ ಹಿಂಸಾಚಾರಗಳ ಹಿನ್ನೆಲೆಯಲ್ಲಿ ಸಿಎಂ ಸ್ಥಾನದಿಂದ ಕೆಳಗಿಳಿಸಬೇಕು ಎಂಬ ಬೇಡಿಕೆ ಬಂದಾಗ ಶಿವಸೇನೆ ಸಂಸ್ಥಾಪಕ ಬಾಳಾ ಠಾಕ್ರೆ ಅವರು ಆಕ್ಷೇಪ ವ್ಯಕ್ತಪಡಿಸಿದ್ದರು.
 
ಮೋದಿ ಅವರನ್ನು ಬೆಂಬಲಿಸಿದ್ದರು' ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಭಾನುವಾರ ಹೇಳಿದ್ದಾರೆ.
 
ಮರಾಠಿ ದೈನಿಕ 'ಲೋಕಸತ್ತಾ'ಗೆ ನೀಡಿದ ಸಂದರ್ಶನದಲ್ಲಿ ಠಾಕ್ರೆ ಈ ಹೇಳಿಕೆ ನೀಡಿದ್ದಾರೆ. 'ಬಿಜೆಪಿ ದಿಗ್ಗಜ ಅಟಲ್ ಬಿಹಾರಿ ವಾಜಪೇಯಿ ಅವರು ದೇಶದ ಪ್ರಧಾನಿಯಾಗಿದ್ದಾಗ ಮೋದಿ ಅವರನ್ನು ಗುಜರಾತ್ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಬೇಕು ಎಂಬ ಬೇಡಿಕೆ ಜೋರಾಗಿತ್ತು. ಅದೇ ಅವಧಿಯಲ್ಲೇ ಮತ್ತೊಬ್ಬ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಅವರು ಸಮಾವೇಶವೊಂದರಲ್ಲಿ ಭಾಗವಹಿಸಲೆಂದು ಮುಂಬೈಗೆ ಬಂದಿದ್ದರು. ಮೋದಿ ಅವರನ್ನು ಕೆಳಗಿಳಿಸುವ ಬೇಡಿಕೆ ಬಗ್ಗೆ ಬಾಳಾ ಠಾಕ್ರೆ ಅವರೊಂದಿಗೆ ಅಡ್ವಾಣಿ ಚರ್ಚಿಸಿದ್ದರು' ಎಂದು ಉದ್ಧವ್‌ ಠಾಕ್ರೆ ಹೇಳಿದ್ದಾರೆ.
 
"ನಾವು (ಸಮಾವೇಶದ ನಂತರ) ಮಾತನಾಡುತ್ತ ಕುಳಿತಿದ್ದೆವು. ಅವರು (ಅಡ್ವಾಣಿ) ಬಾಳಾಸಾಹೇಬ್ ಅವರೊಂದಿಗೆ ಏನೋ ಒಂದು ವಿಷಯದ ಕುರಿತು ಚರ್ಚಿಸಬೇಕು ಎಂದು ಹೇಳಿದರು. ನಂತರ ನಾನು ಮತ್ತು ಪ್ರಮೋದ್ (ಮಹಾಜನ್) ಅಲ್ಲಿಂದ ಎದ್ದು ಹೊರಟೆವು. ಮೋದಿಯವರನ್ನು (ಮುಖ್ಯಮಂತ್ರಿ ಸ್ಥಾನದಿಂದ ತೆಗೆದುಹಾಕುವ ಬೇಡಿಕೆ) ಕುರಿತು ಮಾತನಾಡುತ್ತಾ ಅಡ್ವಾಣಿಯವರು ಬಾಳಾಸಾಹೇಬರ ಅಭಿಪ್ರಾಯ ಕೇಳಿದರು. ಮೋದಿಯನ್ನು ಮುಟ್ಟದಂತೆ ಬಾಳಾಸಾಹೇಬರು ಅಡ್ವಾಣಿಯವರಿಗೆ ಹೇಳಿದರು. ಮೋದಿಯನ್ನು ತೆಗೆದುಹಾಕಿದರೆ, (ಬಿಜೆಪಿ) ಗುಜರಾತ್ ಅನ್ನು ಕಳೆದುಕೊಳ್ಳಬೇಕಾಗುತ್ತದೆ ಮತ್ತು ಅದರಿಂದ ಹಿಂದುತ್ವಕ್ಕೂ ಹಾನಿಯಾಗುತ್ತದೆ' ಎಂದು ಅವರು ಹೇಳಿದ್ದರು ಎಂದು ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ಮುಂದಿನ ಸುದ್ದಿ
Show comments